ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಕಾರು ವಿ.ನಾಲೆಗೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಿಬ್ಬನಹಳ್ಳಿ ಸಮೀಪ ನಡೆದಿದೆ. ತಾಲ್ಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್ (44) ಮೃತ ವ್ಯಕ್ತಿ.
ಲೋಕೇಶ್ ಅವರು ಗುರುವಾರ ಬೆಳಿಗ್ಗೆ ಶಿವಳ್ಳಿ ಗ್ರಾಮದಿಂದ ಪಾಂಡವಪುರದ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಕಾರು ವಿ.ನಾಲೆಗೆ ಹಾರಿದೆ. ಲೋಕೇಶ್ ಅವರ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ.
ಕಾಲುವೆಯಲ್ಲಿ ಹೆಚ್ಚು ನೀರು ಇರುವ ಕಾರಣ ಕಾರು ಮತ್ತು ಲೋಕೇಶ್ ಅವರ ಮೃತದೇಹವನ್ನು ಮೇಲೆತ್ತಲು ಕಾಲುವೆಯ ನೀರನ್ನು ಕಡಿಮೆ ಮಾಡಲು ನೀರಾವರಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ತಡೆಗೋಡೆ ಇಲ್ಲ : ಈ ಘಟನೆ ನಡೆಯಲು ಕಾಲುವೆಗೆ ತಡೆಗೋಡೆ ಇಲ್ಲದಿರುವುದೇ ಕಾರಣವಾಗಿದ್ದು, 2017 ರಲ್ಲೂ ತಡೆಗೋಡೆ ಇಲ್ಲದೇ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಬಳಿ ಬಸ್ ದುರಂತ ಸಂಭವಿಸಿ 34 ಮಂದಿ ಮೃತಪಟ್ಟಿದ್ದರು. ಈ ಘಟನೆಯ ಬಳಿಕ ವಿ.ನಾಲೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲೆಲ್ಲ ತಡೆಗೋಡೆ ನಿರ್ಮಿಸುವುದಾಗಿ ಅಂದಿನ ಸರ್ಕಾರ ಹೇಳಿತ್ತು. ಇಷ್ಟಾದರೂ ಸರ್ಕಾರ ತಡೆಗೋಡೆ ನಿರ್ಮಾಣ ಮಾಡದ ಕಾರಣ ದಿನೇ ದಿನೇ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ.ಈ ಸಂಬಂಧ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…