ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಕಾರು ವಿ.ನಾಲೆಗೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಿಬ್ಬನಹಳ್ಳಿ ಸಮೀಪ ನಡೆದಿದೆ. ತಾಲ್ಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್ (44) ಮೃತ ವ್ಯಕ್ತಿ.
ಲೋಕೇಶ್ ಅವರು ಗುರುವಾರ ಬೆಳಿಗ್ಗೆ ಶಿವಳ್ಳಿ ಗ್ರಾಮದಿಂದ ಪಾಂಡವಪುರದ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಕಾರು ವಿ.ನಾಲೆಗೆ ಹಾರಿದೆ. ಲೋಕೇಶ್ ಅವರ ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ.
ಕಾಲುವೆಯಲ್ಲಿ ಹೆಚ್ಚು ನೀರು ಇರುವ ಕಾರಣ ಕಾರು ಮತ್ತು ಲೋಕೇಶ್ ಅವರ ಮೃತದೇಹವನ್ನು ಮೇಲೆತ್ತಲು ಕಾಲುವೆಯ ನೀರನ್ನು ಕಡಿಮೆ ಮಾಡಲು ನೀರಾವರಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ತಡೆಗೋಡೆ ಇಲ್ಲ : ಈ ಘಟನೆ ನಡೆಯಲು ಕಾಲುವೆಗೆ ತಡೆಗೋಡೆ ಇಲ್ಲದಿರುವುದೇ ಕಾರಣವಾಗಿದ್ದು, 2017 ರಲ್ಲೂ ತಡೆಗೋಡೆ ಇಲ್ಲದೇ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಬಳಿ ಬಸ್ ದುರಂತ ಸಂಭವಿಸಿ 34 ಮಂದಿ ಮೃತಪಟ್ಟಿದ್ದರು. ಈ ಘಟನೆಯ ಬಳಿಕ ವಿ.ನಾಲೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲೆಲ್ಲ ತಡೆಗೋಡೆ ನಿರ್ಮಿಸುವುದಾಗಿ ಅಂದಿನ ಸರ್ಕಾರ ಹೇಳಿತ್ತು. ಇಷ್ಟಾದರೂ ಸರ್ಕಾರ ತಡೆಗೋಡೆ ನಿರ್ಮಾಣ ಮಾಡದ ಕಾರಣ ದಿನೇ ದಿನೇ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ.ಈ ಸಂಬಂಧ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…