ಮಂಡ್ಯ

ವಿಸಿ ನಾಲೆಗೆ ಕಾರು ಬಿದ್ದ ಪ್ರಕರಣ: ಮತ್ತೋರ್ವ ವ್ಯಕ್ತಿ ಶವವಾಗಿ ಪತ್ತೆ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿಬ್ಬನಹಳ್ಳಿ ಬಳಿ ವಿಸಿ ನಾಲೆಗೆ ಕಾರು ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಮೂರನೇ ವ್ಯಕ್ತಿಯೂ ಕೂಡ ಶವವಾಗಿ ಪತ್ತೆಯಾಗಿದ್ದಾರೆ.

ಪಾಂಡವಪುರಕ್ಕೆ ತೆರಳಿದ್ದ ನಾಲ್ವರು ಕಾರಿನಲ್ಲಿ ಮಂಡ್ಯ ಕಡೆಗೆ ಸೋಮವಾರ(ಫೆ.3) ಹಿಂತಿರುವಾಗ ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಉರುಳಿತ್ತು. ಈ ಅಪಘಾತದಲ್ಲಿ ಸಾವಿನ ಸಂಖ್ಯೆ ಮೂರಕ್ಜೆ ಏರಿಕೆಯಾಗಿದ್ದು, ಇದೀಗ ಹಾಲಹಳ್ಳಿ ಸ್ಲಂ ನಿವಾಸಿ ಪೀರ್‌ ಖಾನ್‌ ಶವವಾಗಿ ಪತ್ತೆಯಾಗಿದ್ದಾರೆ.

ನಿನ್ನೆ ನಡೆದ ಈ ದುರಂತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಪತ್ತೆಯಾಗಿದ್ದ ಇಬ್ಬರಿಗಾಗಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಈ ಕಾರ್ಯಾಚರಣೆಯ ವೇಳೆ ಅಸ್ಲಾಂ ಪಾಷ ಎಂಬುವವರು ನಿನ್ನೆ ಶವವಾಗಿ ಪತ್ತೆಯಾಗಿದ್ದರು. ಆದರೆ ಇಂದು(ಫೆಬ್ರವರಿ.4) ನಾಪತ್ತೆಯಾಗಿದ್ದ ಮತ್ತೋರ್ವ ವ್ಯಕ್ತಿ ಪೀರ್‌ ಖಾನ್‌ ಅವರು ಶವವಾಗಿ ಪತ್ತೆಯಾಗಿದ್ದಾರೆ.

ಇನ್ನೂ ನೀರಿನಲ್ಲಿ ಸಾವು-ಬದುಕಿನ ಮಧ್ಯೆ ನಡುವೆ ಹೋರಾಡುತ್ತಿದ್ದ ನಯಾಜ್‌ ಎಂಬಾತನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು.

ಅರ್ಚನ ಎಸ್‌ ಎಸ್

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

59 mins ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

4 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

4 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

4 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

4 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

4 hours ago