ಮಂಡ್ಯ

ವಿಸಿ ನಾಲೆಗೆ ಕಾರು ಬಿದ್ದ ಪ್ರಕರಣ: ಮತ್ತೋರ್ವ ವ್ಯಕ್ತಿ ಶವವಾಗಿ ಪತ್ತೆ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ತಿಬ್ಬನಹಳ್ಳಿ ಬಳಿ ವಿಸಿ ನಾಲೆಗೆ ಕಾರು ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಮೂರನೇ ವ್ಯಕ್ತಿಯೂ ಕೂಡ ಶವವಾಗಿ ಪತ್ತೆಯಾಗಿದ್ದಾರೆ.

ಪಾಂಡವಪುರಕ್ಕೆ ತೆರಳಿದ್ದ ನಾಲ್ವರು ಕಾರಿನಲ್ಲಿ ಮಂಡ್ಯ ಕಡೆಗೆ ಸೋಮವಾರ(ಫೆ.3) ಹಿಂತಿರುವಾಗ ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಉರುಳಿತ್ತು. ಈ ಅಪಘಾತದಲ್ಲಿ ಸಾವಿನ ಸಂಖ್ಯೆ ಮೂರಕ್ಜೆ ಏರಿಕೆಯಾಗಿದ್ದು, ಇದೀಗ ಹಾಲಹಳ್ಳಿ ಸ್ಲಂ ನಿವಾಸಿ ಪೀರ್‌ ಖಾನ್‌ ಶವವಾಗಿ ಪತ್ತೆಯಾಗಿದ್ದಾರೆ.

ನಿನ್ನೆ ನಡೆದ ಈ ದುರಂತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಪತ್ತೆಯಾಗಿದ್ದ ಇಬ್ಬರಿಗಾಗಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಈ ಕಾರ್ಯಾಚರಣೆಯ ವೇಳೆ ಅಸ್ಲಾಂ ಪಾಷ ಎಂಬುವವರು ನಿನ್ನೆ ಶವವಾಗಿ ಪತ್ತೆಯಾಗಿದ್ದರು. ಆದರೆ ಇಂದು(ಫೆಬ್ರವರಿ.4) ನಾಪತ್ತೆಯಾಗಿದ್ದ ಮತ್ತೋರ್ವ ವ್ಯಕ್ತಿ ಪೀರ್‌ ಖಾನ್‌ ಅವರು ಶವವಾಗಿ ಪತ್ತೆಯಾಗಿದ್ದಾರೆ.

ಇನ್ನೂ ನೀರಿನಲ್ಲಿ ಸಾವು-ಬದುಕಿನ ಮಧ್ಯೆ ನಡುವೆ ಹೋರಾಡುತ್ತಿದ್ದ ನಯಾಜ್‌ ಎಂಬಾತನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago