ಮಂಡ್ಯ

ಅಕ್ಟೋಬರ್ 16 ಕ್ಕೆ ಕಾವೇರಿ 5-ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ

ಮಂಡ್ಯ:  ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ. ಕೆ. ಹಳ್ಳಿ ) ಯಲ್ಲಿ ಅಕ್ಟೋಬರ್ 16 ರ ಬುಧವಾರ ಬೆಳಿಗ್ಗೆ 10.30 ಗಂಟೆಗೆ ಕಾವೇರಿ ಐದನೇ ಹಂತ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಸಮಾರಂಭವನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ ಸಚಿವರು ಆದಾ ಉಪಮುಖ್ಯಮಂತ್ರಿಗ ಡಿ.ಕೆ ಶಿವಕುಮಾರ್ ಅವರು ಲೋಕಾರ್ಪಣೆ ಮಾಡಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಕೇಂದ್ರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯಾವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್. ಡಿ. ಕುಮಾರಸ್ವಾಮಿ, ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಭಾಗವಹಿಸಲಿದ್ದಾರೆ. ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ, ಸಾರಿಗೆ ಮತ್ತು ಮುಜರಾಯಿ ಸಚಿವ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರು ರಾಮಲಿಂಗಾರೆಡ್ಡಿ, ಇಂಧನ ಸಚಿವ ಕೆ.ಜೆ. ಜಾರ್ಜ್, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ವಸತಿ ವಕ್ಫ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು, ನಗರಾಭಿವೃದ್ದಿ ಮತ್ತು ನಗರ ಯೋಜನೆ ಸಚಿವರು ಸುರೇಶ್ ಬಿ.ಎಸ್.(ಭೈರತಿ ) ಹಾಗೂ ಇನ್ನಿತರ ಸಚಿವರು ,ಸಂಸದರು, ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮನೆ ಮನೆಗೂ ಕಾವೇರಿ ನೀರು ಇದು ಸಮೃದ್ಧ ಬೆಂಗಳೂರು

50 ಲಕ್ಷ ಫಲಾನುಭವಿಗಳು,
4 ಲಕ್ಷ ಸಂಪರ್ಕ,
4336 ಕೋಟಿ ರೂ. ವೆಚ್ಚ
775 ಎಂ. ಎಲ್. ಡಿ ಹೆಚ್ಚುವರಿ ನೀರು ಪೂರೈಕೆಯಾಗಲಿದೆ.

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು ಸರಬರಾಜು, ಯಲಹಂಕ, ಯಶವಂತಪುರ, ಬೆಂಗಳೂರು ದಕ್ಷಿಣ, ಬ್ಯಾಟರಾಯನಪುರ, ಬೊಮ್ಮನಹಳ್ಳಿ ವಲಯದ ಮನೆ ಮನೆಗೂ ಕಾವೇರಿ ನೀರು ಪೂರೈಕೆಯಾಗಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

2 hours ago

ಸಿಎಸ್‌ ಹೆಸರು ಪ್ರಸ್ತಾಪಿಸಿದ್ದಕ್ಕೆ ಕ್ಷಮೆ : ಸ್ನೇಹಮಯಿ ಕೃಷ್ಣ ಸ್ಪಷ್ಟನೆ

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ.…

2 hours ago

ಶಿಕ್ಷಕರ ನೇಮಕಾತಿ ಶೀಘ್ರ : ಸಿಎಂ ಭರವಸೆ

ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ…

3 hours ago

ಒಕ್ಕಲಿಗರ ಮೇಲೆ ಪ್ರೀತಿ ಪ್ರದರ್ಶನಕ್ಕೆ ಇದು ಸಕಾಲ ಎಂದು ಸಿದ್ದರಾಮಯ್ಯ ಕಾಲೆಳೆದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…

3 hours ago

ಗಾಂಜಾ ಮಾರಾಟಕ್ಕೆ ಯತ್ನ : ಬಂಧನ

ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…

3 hours ago

ʻಮನ್‌ ಕಿ ಬಾತ್‌ʼನಲ್ಲಿ ಕರ್ನಾಟಕದ ರೈತರನ್ನು ಪ್ರಶಂಸಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…

3 hours ago