Cauvery Aarti and amusement park: High Court issues a stay order
ರೈತ ಹೋರಾಟಗಾರರಿಗೆ ಗೆಲುವು ; ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ
ಮಂಡ್ಯ : ಹಳೇ ಮೈಸೂರು ಪ್ರಾಂತ್ಯದ ರೈತರು ಹಾಗೂ ಜನರ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ಬಳಿ ಸರ್ಕಾರ ಸ್ಥಾಪಿಸಲು ಹೊರಟಿದ್ದ ಅಮ್ಯೂಸ್ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿಗೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಕೆ.ಆರ್.ಎಸ್. ಬಳಿ ಅಮ್ಯೂಸ್ಮೆಂಟ್ ಪಾರ್ಕ್ ಮಾಡುವುದರಿಂದ ಜಲಾಶಯಕ್ಕೆ ಅಪಾಯ ಬರಬಹುದು ಎಂಬ ಆತಂಕದಿಂದ ರೈತರು, ಹೋರಾಟಗಾರರು, ವಿವಿಧ ಸಂಘಟನೆಗಳ ಕಾರ್ಯಕರ್ತರು, ಪರಿಸರವಾದಿಗಳು ವಿವಿಧ ಚಳವಳಿಗಾರರ ವಿರೋಧದ ನಡುವೆ ರಾಜ್ಯ ಸರ್ಕಾರ ಅಮ್ಯೂಸ್ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ ನಡೆಸಲು ಕಾಮಗಾರಿ ಕೈಗೊಂಡಿತ್ತು.
ರಾಜ್ಯ ಸರ್ಕಾರದ ಇಂತಹ ನಿರ್ಧಾರವನ್ನು ಪ್ರಶ್ನಿಸಿ ರೈತ ಹೋರಾಟಗಾರ ಕೆ.ಬೋರಯ್ಯ ಅವರು ಅಮ್ಯೂಸ್ಮೆಂಟ್ ಪಾರ್ಕ್ ವಿರೋಧಿಸಿ ರಾಜ್ಯ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.
ಈ ಪ್ರಕರಣದ ಅರ್ಜಿಯನ್ನು ಕೈಗೆತ್ತಿಕೊಂಡ ರಾಜ್ಯ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಕಾಮೇಶ್ವರರಾವ್ ಹಾಗೂ ಸಿ.ಎಂ.ಜೋಶಿ ಅವರು ಎರಡು ದಿನಗಳ ಕಾಲ ಸುಧೀರ್ಘ ವಿಚಾರಣೆ ನಡೆಸಿ ಕನ್ನಂಬಾಡಿ ಅಣೆಕಟ್ಟೆ ಬಳಿ ರಾಜ್ಯ ಸರ್ಕಾರ ನಿರ್ಮಿಸಲು ಉದ್ದೇಶಿಸಿದ್ದ ಅಮ್ಯೂಸ್ಮೆಂಟ್ ಪಾರ್ಕ್ಗೆ ತಡೆಯಾಜ್ಞೆ ನೀಡಿದೆ.
ಕಾವೇರಿ ಆರತಿ ವಿಚಾರಕ್ಕೆ ಸಂಬಂಧಿಸಿದಂತೆ ರೈತ ಹೋರಾಟಗಾರ್ತಿ ಸುನಂದಾ ಜಯರಾಂ ಅವರು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮೇಲ್ಕಂಡ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳು ಅರ್ಜಿದಾರರ ಮನವಿಯ ಮೇರೆಗೆ ಕಾವೇರಿ ಆರತಿ ಯೋಜನೆಗೂ ತಡೆಯಾಜ್ಞೆ ನೀಡಿದೆ. ಎರಡೂ ಪ್ರಕರಣಗಳಿಗೆ ಸಂಬಂಧಸಿದಂತೆ ವಕೀಲ ಎಂ.ಶಿವಪ್ರಕಾಶ್ ಅವರು ವಾದ ಮಂಡಿಸಿದ್ದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…