ಮಂಡ್ಯ

ಕಾವೇರಿ ಆರತಿ, ಅಮ್ಯೂಸ್‌ಮೆಂಟ್‌ ಪಾರ್ಕ್‌ಗೆ ʻಹೈʼ ತಡೆ

ರೈತ ಹೋರಾಟಗಾರರಿಗೆ ಗೆಲುವು ; ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ

ಮಂಡ್ಯ : ಹಳೇ ಮೈಸೂರು ಪ್ರಾಂತ್ಯದ ರೈತರು ಹಾಗೂ ಜನರ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ಬಳಿ ಸರ್ಕಾರ ಸ್ಥಾಪಿಸಲು ಹೊರಟಿದ್ದ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿಗೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಕೆ.ಆರ್.ಎಸ್. ಬಳಿ ಅಮ್ಯೂಸ್‌ಮೆಂಟ್ ಪಾರ್ಕ್ ಮಾಡುವುದರಿಂದ ಜಲಾಶಯಕ್ಕೆ ಅಪಾಯ ಬರಬಹುದು ಎಂಬ ಆತಂಕದಿಂದ ರೈತರು, ಹೋರಾಟಗಾರರು, ವಿವಿಧ ಸಂಘಟನೆಗಳ ಕಾರ್ಯಕರ್ತರು, ಪರಿಸರವಾದಿಗಳು ವಿವಿಧ ಚಳವಳಿಗಾರರ ವಿರೋಧದ ನಡುವೆ ರಾಜ್ಯ ಸರ್ಕಾರ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿ ನಡೆಸಲು ಕಾಮಗಾರಿ ಕೈಗೊಂಡಿತ್ತು.

ರಾಜ್ಯ ಸರ್ಕಾರದ ಇಂತಹ ನಿರ್ಧಾರವನ್ನು ಪ್ರಶ್ನಿಸಿ ರೈತ ಹೋರಾಟಗಾರ ಕೆ.ಬೋರಯ್ಯ ಅವರು ಅಮ್ಯೂಸ್‌ಮೆಂಟ್ ಪಾರ್ಕ್ ವಿರೋಧಿಸಿ ರಾಜ್ಯ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಪ್ರಕರಣದ ಅರ್ಜಿಯನ್ನು ಕೈಗೆತ್ತಿಕೊಂಡ ರಾಜ್ಯ ಉಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಕಾಮೇಶ್ವರರಾವ್ ಹಾಗೂ ಸಿ.ಎಂ.ಜೋಶಿ ಅವರು ಎರಡು ದಿನಗಳ ಕಾಲ ಸುಧೀರ್ಘ ವಿಚಾರಣೆ ನಡೆಸಿ ಕನ್ನಂಬಾಡಿ ಅಣೆಕಟ್ಟೆ ಬಳಿ ರಾಜ್ಯ ಸರ್ಕಾರ ನಿರ್ಮಿಸಲು ಉದ್ದೇಶಿಸಿದ್ದ ಅಮ್ಯೂಸ್‌ಮೆಂಟ್ ಪಾರ್ಕ್‌ಗೆ ತಡೆಯಾಜ್ಞೆ ನೀಡಿದೆ.

ಕಾವೇರಿ ಆರತಿ ವಿಚಾರಕ್ಕೆ ಸಂಬಂಧಿಸಿದಂತೆ ರೈತ ಹೋರಾಟಗಾರ್ತಿ ಸುನಂದಾ ಜಯರಾಂ ಅವರು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮೇಲ್ಕಂಡ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳು ಅರ್ಜಿದಾರರ ಮನವಿಯ ಮೇರೆಗೆ ಕಾವೇರಿ ಆರತಿ ಯೋಜನೆಗೂ ತಡೆಯಾಜ್ಞೆ ನೀಡಿದೆ. ಎರಡೂ ಪ್ರಕರಣಗಳಿಗೆ ಸಂಬಂಧಸಿದಂತೆ ವಕೀಲ ಎಂ.ಶಿವಪ್ರಕಾಶ್ ಅವರು ವಾದ ಮಂಡಿಸಿದ್ದರು.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

4 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

5 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

8 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

10 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

11 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

12 hours ago