ಮಂಡ್ಯ

ಕಾನೂನು ಉಲ್ಲಂಘಿಸಿ ಪ್ರಯೋಗಿಕವಾಗಿ ಕಾವೇರಿ ಆರತಿ

ಮಂಡ್ಯ : ಕೆ.ಆರ್.ಎಸ್. ಅಣೆಕಟ್ಟೆ ಬಳಿ ಪ್ರಾಯೋಗಿಕವಾಗಿ ಕಾವೇರಿ ಆರತಿ ಮಾಡುವ ಮೂಲಕ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜನರಿಗೆ ದ್ರೋಹ ಹಾಗೂ ಕಾನೂನುಭಂಗವುಂಟು ಮಾಡಿದ್ದಾರೆ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಸುನಂದಾ ಜಯರಾಂ ಆರೋಪಿಸಿದರು.

ಕೆ.ಆರ್.ಎಸ್. ಅಣೆಕಟ್ಟೆ ಬಳಿ ರಾಜ್ಯ ಸರ್ಕಾರದ ಕಾವೇರಿ ನೀರಾವರಿ ನಿಗಮದ ವತಿಯಿಂದ ಪ್ರಾಯೋಗಿಕವಾಗಿ ೧೩ ಮಂದಿ ಪುರೋಹಿತರನ್ನು ಇಟ್ಟುಕೊಂಡು ಕಾವೇರಿ ಆರತಿ ಮಾಡುವ ಮೂಲಕ ಇಡೀ ಪ್ರಕ್ರಿಯೆಗೆ ದ್ರೋಹ, ಮಾಡಲಾಗಿದೆ. ಅಣೆಕಟ್ಟೆ ನಿಷೇಧಿತ ಪ್ರದೇಶ, ಪ್ರವಾಸೋದ್ಯಮ ಚಟುವಟಿಕೆಯನ್ನು ಅಣೆಕಟ್ಟೆ ಬಳಿ ಮಾಡಲಾಗದು. ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಆ ಸಂಬಂಧ ಪ್ರಕರಣ ಇದ್ದರೂ ಆಡಳಿತಾರೂಢ ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗ ಕಾವೇರಿ ಆರತಿ ಮಾಡುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಇದನ್ನು ಓದಿ ; ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿ ತಿಳಿಯಲು ಸಮೀಕ್ಷೆ : ಸಮೀಕ್ಷೆಗೆ ಚಾಲನೆ ನೀಡಿ ಸಚಿವ ಚಲುವರಾಯಸ್ವಾಮಿ ಅಭಿಮತ

ಜಿಲ್ಲೆಯ ಜೀವನಾಡಿ ಕೆ.ಆರ್.ಎಸ್. ಅಣೆಕಟ್ಟೆಯನ್ನು ನಾಶ ಮಾಡಲು ಇಬ್ಬರು ವ್ಯಕ್ತಿಗಳು ಕಂಕಣ ತೊಟ್ಟಿದ್ದಾರೆ. ಒಬ್ಬರು ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆ, ಕಾವೇರಿ ಆರತಿ ಯೋಜನೆ ರೂವಾರಿ ಡಿ.ಕೆ. ಶಿವಕುಮಾರ್, ಮತ್ತೊಬ್ಬರು ಅಣೆಕಟ್ಟೆ ಹಿನ್ನೀರಿನಲ್ಲಿ ವಿಮಾನಯಾನ (ಸೀಪ್ಲೇಸ್) ಯೋಜನೆ ರೂವಾರಿ ಎಚ್.ಡಿ. ಕುಮಾರಸ್ವಾಮಿ ಇಬ್ಬರೂ ಮಂಡ್ಯದ ಜನರನ್ನು ಕುರಿಗಳು, ಹಿಂಬಾಲಕರೆಂಬ ಧೋರಣೆಯವರಾಗಿದ್ದಾರೆ. ಖಾಸಗಿ ಲಾಬಿಗೋಸ್ಕರ ಕೆ.ಆರ್.ಎಸ್. ಅಣಕಟ್ಟೆ ಪ್ರದೇಶಗಳಲ್ಲಿ ಖಾಸಗೀಕರಣಕ್ಕೆ ನೀಡಲು ಬದ್ಧರಾಗಿದ್ದಾರೆ ಎಂದು ಕಿಡಿಕಾರಿದರು.

ಜಿಲ್ಲಾಧಿಕಾರಿ ಜನಪ್ರತಿನಿಧಿಗಳ ಮುಖವಾಣಿ:
ಕೆ.ಆರ್.ಎಸ್.ನಲ್ಲಿ ಕಾವೇರಿ ಆರತಿ ಮಾಡುತ್ತಿದ್ದರೂ, ಜಿಲ್ಲಾಧಿಕಾರಿ ಮತ್ತು ಇತರೆ ಅಧಿಕಾರಿಗಳು ಜನಪ್ರತಿನಿಗಳ ಮುಖವಾಣಿಗಳಾಗಿ ಕೆಲಸ ಮಾಡುತ್ತಿದ್ದಾರೆ. ನಾವು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರೆ ಮಾಡುತ್ತೇವೆ ಎನ್ನುತ್ತಾರೆಯೇ ವಿನಾ, ಇಂತಹ ಕಾನೂನುಬಾಹಿರ ಕೃತ್ಯಗಳನ್ನು ತಡೆಯುವಲ್ಲಿ ವಿಫಲರಾಗಿದ್ದಾರೆ ಎಂದು ಕಿಡಿಕಾರಿದರು.

ಇದನ್ನು ಓದಿ ; ಮಡಿಕೇರಿ ದಸರಾ ಮಹೋತ್ಸವದಲ್ಲಿ ನಾಳೆ ಕಾಫಿ ಘಮಲು

ಸರ್ವಾಧಿಕಾರಿ ಧೋರಣೆ
ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಬಿ. ಶಿವಕುಮಾರ್ ಮಾತನಾಡಿ, ಜಿಲ್ಲೆಯಲ್ಲಿನ ಆಡಳಿತ ಸುಧಾರಣೆ ಮಾಡಿ ಅಭಿವೃದ್ಧಿಗೆ ಒತ್ತು ನೀಡಬೇಕಾದ ಜಿಲ್ಲಾ ಉಸ್ತುವಾರಿ ಸಚಿವರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ನಾವು ಎಷ್ಟೋ ಮಂದಿ ಉಸ್ತುವಾರಿ ಸಚಿವರನ್ನು ನೋಡಿದ್ದೇವೆ. ಧೋರಣೆ ಬದಲಿಸದಿದ್ದರೆ ಅವರನ್ನು ಹಿಡಿದು ಕೇಳುವ ಕೆಲಸವನ್ನು ರೈತರೊಂದಿಗೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಮಿತಿಯ ಪದಾಧಿಕಾರಿಗಳಾದ ಕೆ.ಬೋರಯ್ಯ, ಎಚ್.ಕೆಂಪೂಗೌಡ, ಎಚ್. ಚಂದ್ರಶೇಖರ್, ಎಂ.ವಿ. ಕೃಷ್ಣ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಕಾರ್ಯಕ್ರಮಗಳಲ್ಲಿ ಜನರ ಸುರಕ್ಷತೆ: ಹೊಸ ಸುತ್ತೋಲೆ

ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…

26 mins ago

ಲಕ್ಕುಂಡಿ ಬೆನ್ನಲ್ಲೇ ಯಾದಗಿರಿಯಲ್ಲೂ ಉತ್ಖನನ ನಡೆಸಲು ಸಿದ್ಧತೆ

ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…

44 mins ago

ಸಂಸದ ಯದುವೀರ್‌ ಒಡೆಯರ್‌ ಭೇಟಿಯಾದ ಪ್ರತಾಪ್‌ ಸಿಂಹ

ಮೈಸೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಸಂಸದ ಯದುವೀರ್‌ ಒಡೆಯರ್‌ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…

1 hour ago

ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ “ಲ್ಯಾಂಡ್ ಲಾರ್ಡ್” ಸಿನಿಮಾ ನೋಡಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…

2 hours ago

ಜಮ್ಮು-ಕಾಶ್ಮೀರದಲ್ಲಿ ಭಾರೀ ಹಿಮಪಾತ: ಜನಜೀವನ ಅಸ್ತವ್ಯಸ್ತ

ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…

2 hours ago

ಪಾಕಿಸ್ತಾನ ಮದುವೆ ಸಮಾರಂಭದಲ್ಲಿ ಆತ್ಮಾಹುತಿ ದಾಳಿ: ಐವರು ಸಾವು

ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…

2 hours ago