ಮಂಡ್ಯ

ಕೆಆರ್‌ಎಸ್‌ ಬಳಿ ಕಾವೇರಿ ಆರತಿ, ಅಮ್ಯೂಸ್‌ಮೆಂಟ್‌ ಪಾರ್ಕ್‌ ರದ್ದತ್ತಿಗೆ ಆಗ್ರಹ

ಯೋಜನೆಗಳು ಕೆಆರ್‌ಎಸ್‌ ಅಣೆಕಟ್ಟೆಗೆ ಅಪಾಯ

ಮಂಡ್ಯ: ಕೆಆರ್‌ಎಸ್ ಅಣೆಕಟ್ಟಿನ ಬಳಿ ಅಮ್ಯೂಸ್‌ಮೆಂಟ್ ಪಾರ್ಕ್, ಕಾವೇರಿ ಆರತಿ ಯೋಜನೆ, ೬ನೇ ಹಂತದಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಯೋಜನೆಗಳು ಅಣೆಕಟ್ಟಿಗೆ ಅಪಾಯ ತರುವಂತದ್ದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಮಧ್ಯೆ ಪ್ರವೇಶಿಸಿ ರದ್ದುಪಡಿಸಬೇಕು ಎಂದು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಸಂಘಟನಾ ಕಾರ್ಯದರ್ಸಿ ಹಾಗೂ ರೈತ ಮುಖಂಡರೂ ಆದ ಸುನಂದ ಜಯರಾಂ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಆರ್‌ಎಸ್ ಅಣೆಕಟ್ಟೆ ಬಳಿ ಮೋಜು ಮಸ್ತಿಗಾಗಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣ, ಅವಶ್ಯಕತೆಯೇ ಇಲ್ಲದ ಕಾವೇರಿ ಆರತಿಯ ಅಗತ್ಯವಿಲ್ಲ, ರೈತರ ಬದುಕು ಹಸುನಾಗಿಸಲು ನಿರ್ಮಾಣವಾದ ಅಣೆಕಟ್ಟೆಯ ನೀರು ಬೆಂಗಳೂರಿಗೆ ಹಂತ ಹಂತವಾಗಿ ಕೊಂಡೊಯ್ಯುತ್ತಿದ್ದು ಈ ಭಾಗದ ರೈತರ ಬದುಕನ್ನು ದುಸ್ತರಕ್ಕೆ ದೂಡಲಾಗುತ್ತಿದೆ ಎಂದರು.

ಸರ್ಕಾರ ಅಭಿವೃದ್ಧಿ ಹೆಸರಿನಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್‌ಗೆ ೨೬೬೩ ಕೋಟಿ ರೂ, ಕಾವೇರಿ ಆರತಿಗೆ ೧೦೦ ಕೋಟಿ ರೂ, ಬೆಂಗಳೂರಿಗೆ ನೀರು ಕೊಂಡೊಯ್ಯಲು ೭೫೦೦ ಕೋಟಿ ರೂ ವ್ಯಯಿಸುತ್ತಿದ್ದು, ಈ ಎಲ್ಲಾ ಯೋಜನೆಗಳು ಅಣೆಕಟ್ಟಿನ ಭದ್ರತೆಗೆ ಧಕ್ಕೆ ತರುವಂತವಾಗಿದ್ದು ಇವನ್ನು ಕೂಡಲೇ ಕೈ ಬಿಡುವುದಾಗಿ ಸರ್ಕಾರ ಘೋಷಣೆ ಮಾಡಬೇಕೆಂದು ಒತ್ತಾಯಿಸಿದರು.

ಅಣೆಕಟ್ಟಿನ ವ್ಯಾಪ್ತಿಗೆ ಶ್ರೀರಂಗಪಟ್ಟಣದ ೩ ಹಾಗೂ ಪಾಂಡವಪುರದ ೩ ಸೇರಿ ಒಟ್ಟು ೬ ಗ್ರಾ.ಪಂಚಾಯಿತಿಗಳು ಬರಲಿದ್ದು, ಸದರಿ ಯೋಜನೆಗಳ ವಿರುದ್ಧವಾಗಿ ೪ ಗ್ರಾ.ಪಂಚಾಯಿತಿಗಳು ಹಕ್ಕು ಮಂಡಿಸಿದ್ದು, ೧ ಗ್ರಾ.ಪಂಚಾಯಿತಿ ತನ್ನ ನಿಲುವು ತಿಳಿಸಿಲ್ಲ, ಮತ್ತೊಂದು ಗ್ರಾ.ಪಂಚಾಯಿತಿ ಡೋಲಾಯಮಾನ ಸ್ಥಿತಿಯಲ್ಲಿ ಸ್ಥಿರತೆಯನ್ನು ತೋರುತ್ತಿದೆ ಎಂದು ಮಾಹಿತಿ ನೀಡಿದರು.

ಈ ಸಂಬಂಧ ವಿಪಕ್ಷಗಳು, ಜಿಲ್ಲೆಯ ಸಂಸದರು, ಸ್ಥಳೀಯ ಶಾಸಕರು ಚಕಾರವೆತ್ತುತ್ತಿಲ್ಲ, ಜಿಲ್ಲೆಯ ಶಾಸಕರುಗಳು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗೆ ಈ ಬಗ್ಗೆ ಎಷ್ಟೇ ತಾಕುವಂತೆ ಹೇಳಿದರೂ ತಡೆಗೆ ಮುಂದಾಗದಿದ್ದು, ಅವರಿಗೆ ಎಚ್ಚರಿಕೆ ಗಂಟೆ ನೀಡುತ್ತಿದ್ದೇವೆ, ಯಾರೂ ಸದರಿ ಯೋಜನೆಗಳ ಹೆಸರಿನಲ್ಲಿ ಅಣೆಕಟ್ಟೆಯ ಬಳಿಯೂ ಸುಳಿಯಬಾರದು. ಈ ಸಂಬಂಧ ಹೆಚ್.ಡಿ.ಕುಮಾರಸ್ವಾಮಿ ಧನಿಯೆತ್ತಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ರೈತ ಮುಖಂಡರಾದ ಕೆ.ಬೋರಯ್ಯ, ಇಂಡುವಾಳು ಚಂದ್ರಶೇಖರ್, ಕನ್ನಡ ಸೇನೆಯ ಮಂಜುನಾಥ್, ಎಸ್.ನಾರಾಯಣ್, ಕೃಷ್ಣ, ಗ್ರಾ.ಪಂಚಾಯಿತಿ ಉಪಾಧ್ಯಕ್ಷ ಪಾಪಣ್ಣ, ರವಿಶಂಕರ್, ನರಸಿಂಹ ಇದ್ದರು.

ಆಂದೋಲನ ಡೆಸ್ಕ್

Recent Posts

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

60 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

2 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

4 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

4 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

4 hours ago

ನಂಜನಗೂಡು ನಗರಸಭೆ ವಾರ್ಡ್ ವಿಂಗಡಣೆ ; ಒಂದರಲ್ಲಿ ಸಾವಿರ ; ಮತ್ತೊಂದರಲ್ಲಿ 6 ಸಾವಿರ ಜನ

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು…

4 hours ago