ಮಂಡ್ಯ : ಗಂಗಾರತಿ ಮಾದರಿಯಲ್ಲಿ KRS ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಈಗಾಗಲೇ ೨೫ ಜನರ ತಂಡ ಕಳುಹಿಸಿ ನಂತರ ವರದಿ ಕೊಡುತ್ತಾರೆ. ಆನಂತರ ಕಾವೇರಿ ಆರತಿ ಕಾರ್ಯಕ್ರಮವನ್ನು ಮಾಡುತ್ತೇವೆ. ಧಾರ್ಮಿಕದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಸೇರಿಕೊಂಡು ಕಾರ್ಯಕ್ರಮ ಮಾಡುತ್ತಾರೆ ಎಂದರು.
ಅಲ್ಲದೆ ಕಾವೇರಿ ಬೃಂದಾವನ ಅಮ್ಯೂಸೆಂಟ್ ಪಾರ್ಕ್ ಮಾಡಲಾಗುತ್ತದೆ. ಏನು ಯೋಜನೆ ಎಂಬುದು ಮುಂದೆ ಗೊತ್ತಾಗುತ್ತದೆ. ಯಾರೂ ಗಾಬರಿ ಆಗುವುದು ಬೇಡ. ಟೀಕೆ ಟಿಪ್ಪಣಿ ಹಾರ ಹಾಕುವವರು, ಕಲ್ಲು ಹೊಡೆಯುವವರು ಎಲ್ಲರೂ ಕೂಡ ಇರುತ್ತಾರೆ. ರಾಜಕಾರಣದಲ್ಲಿ ಇವೆಲ್ಲಾ ಇರುತ್ತದೆ. ಯಾರನ್ನೂ ಒಕ್ಕಲೆಬ್ಬುಸುವುದಿಲ್ಲ. ರಸ್ತೆ ವಿಸ್ತರಣೆ ಮಾಡುತ್ತೇವೆ. ಡ್ಯಾಂ ಸುರಕ್ಷತೆಗೆ ಏನು ಬೇಕೋ ಎಲ್ಲಾ ರೀತಿಯ ಕ್ರಮಗಳನ್ನು ತೆಗದುಕೊಳ್ಳುತ್ತೇವೆ ಎಂದು ಡಿಕೆಶಿ ಹೇಳಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…