ಮಂಡ್ಯ : ಗಂಗಾರತಿ ಮಾದರಿಯಲ್ಲಿ KRS ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.
ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಈಗಾಗಲೇ ೨೫ ಜನರ ತಂಡ ಕಳುಹಿಸಿ ನಂತರ ವರದಿ ಕೊಡುತ್ತಾರೆ. ಆನಂತರ ಕಾವೇರಿ ಆರತಿ ಕಾರ್ಯಕ್ರಮವನ್ನು ಮಾಡುತ್ತೇವೆ. ಧಾರ್ಮಿಕದತ್ತಿ ಇಲಾಖೆ, ಕಾವೇರಿ ನೀರಾವರಿ ನಿಗಮ ಸೇರಿಕೊಂಡು ಕಾರ್ಯಕ್ರಮ ಮಾಡುತ್ತಾರೆ ಎಂದರು.
ಅಲ್ಲದೆ ಕಾವೇರಿ ಬೃಂದಾವನ ಅಮ್ಯೂಸೆಂಟ್ ಪಾರ್ಕ್ ಮಾಡಲಾಗುತ್ತದೆ. ಏನು ಯೋಜನೆ ಎಂಬುದು ಮುಂದೆ ಗೊತ್ತಾಗುತ್ತದೆ. ಯಾರೂ ಗಾಬರಿ ಆಗುವುದು ಬೇಡ. ಟೀಕೆ ಟಿಪ್ಪಣಿ ಹಾರ ಹಾಕುವವರು, ಕಲ್ಲು ಹೊಡೆಯುವವರು ಎಲ್ಲರೂ ಕೂಡ ಇರುತ್ತಾರೆ. ರಾಜಕಾರಣದಲ್ಲಿ ಇವೆಲ್ಲಾ ಇರುತ್ತದೆ. ಯಾರನ್ನೂ ಒಕ್ಕಲೆಬ್ಬುಸುವುದಿಲ್ಲ. ರಸ್ತೆ ವಿಸ್ತರಣೆ ಮಾಡುತ್ತೇವೆ. ಡ್ಯಾಂ ಸುರಕ್ಷತೆಗೆ ಏನು ಬೇಕೋ ಎಲ್ಲಾ ರೀತಿಯ ಕ್ರಮಗಳನ್ನು ತೆಗದುಕೊಳ್ಳುತ್ತೇವೆ ಎಂದು ಡಿಕೆಶಿ ಹೇಳಿದರು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…