ಮಂಡ್ಯ

ಕಾವೇರಿ ನದಿ ನೀರು | ಏ.5 ರಂದು ಒಂದು ದಿನದ ಕಾರ್ಯಾಗಾರ

ಮಂಡ್ಯ: ಕಾವೇರಿ ನದಿ ರಕ್ಷಣಾ ಸಮಿತಿ ವತಿಯಿಂದ ನ್ಯಾಯಯುತ ನೀರಿನ ಹಕ್ಕಿಗಾಗಿ ಒಂದು ದಿನದ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣವನ್ನು ಬೆಂಗಳೂರಿನ ಕೆ.ಆರ್.ರಸ್ತೆಯ ಕೆಂಪೇಗೌಡ ಆಸ್ಪತ್ರೆ ಆವರಣದಲ್ಲಿನ ಏಪ್ರಿಲ್ ೦೫ರಂದು ಬೆಳಿಗ್ಗೆ ೧೦ ಗಂಟೆಗೆ ಆಯೋಜಿಸಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಹೆಚ್.ಕೆ.ರಾಮು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂರು ವರ್ಷಗಳ ಹಿಂದೆ ರಚಿಸಲಾದ ಆದೇಶದ ಮೇಲೆ ನೀರು ಹಂಚಿಕೆ ಮಾಡಲಾಗುತ್ತಿದ್ದು, ಸಂಕಷ್ಟ ಸೂತ್ರಗಳನ್ನು ರಚಿಸುವಂತೆ ಒತ್ತಡ ಹೇರಲು ಸಮಿತಿ ಮುಂದಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಠದ ಪೀಠಾಧಿಪತಿ ಡಾ.ನಿರ್ಮಲಾನಂದನಾಥ ಸ್ವಾಮಿಜಿ ಉದ್ಘಾಟಿಸಲಿದ್ದು, ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸುವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯದ ವಿಪಕ್ಷ ನಾಯಕ ಆರ್.ಅಶೋಕ್, ಸಾರಿ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ, ಲೋಕಸಭಾ ಸದಸ್ಯರಾದ ಡಾ.ಸಿ.ಎನ್.ಮಂಜುನಾಥ್, ಯಧುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್, ಒಕ್ಕಲಿಗ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಭಾಗವಹಿಸಲಿದ್ದು, ವಿಶ್ರಾಂತ ನ್ಯಾಯಾಧೀಶರಾದ ವಿ.ಗೋಪಾಲಗೌಡ, ಎ.ಜೆ.ಸದಾಶಿವ, ಚಂದ್ರಶೇಕರಯ್ಯ ಘನ ಉಪಸ್ಥಿತಿ ವಹಿಸುವರು ಎಂದರು.

ಬೆಳಿಗ್ಗೆ ೧೧.೩೦ಕ್ಕೆ ಕಾರ್ಯಾಗಾರ ಹಾಗೂ ವಿಚಾರ ಸಂಕಿರಣ ಕಾರ್ಯಕ್ರಮವು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಕಾಗಿನೆಲೆ ಮಠದ ನಿರಂಜನಾನಂದಪುರಿ ಸ್ವಾಮೀಜಿ ದಿವ್ಯಸಾನಿಧ್ಯದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಸಚಿವರಾದ ಎನ್.ಚಲುವರಾಯಸ್ವಾಮಿ, ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ಲೋಕಸಭಾ ಸದಸ್ಯ ಸುನೀಲ್ ಬೋಸ್ ಭಾಗವಹಿಸುವರು ಎಂದು ತಿಳಿಸಿದರು.

ನೀರಾವರಿ ತಜ್ಞರಾದ ವಿಧಾಪರಿಷತ್‌ನ ಮಾಜಿ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ನೀರಾವರಿ ಇಲಾಖೆಯ ನಿವೃತ್ತ ಮುಖ್ಯ ಅಭಿಯಂತರರಾದ ಜಯಪ್ರಕಾಶ್, ರಾಮಯ್ಯ, ವೆಂಕಟರಾಮು ವಿಷಯ ಮಂಡನೆ ಮಾಡಲಿದ್ದು, ಹಿರಿಯ ವಕೀಲರಾದ ಕೆ.ವಿ.ಧನಂಜಯ, ಆರ್.ಎಸ್.ರವಿ ಕಾವೇರಿ ನದಿ ರಕ್ಷಣೆ ಬಗ್ಗೆ ವಿಷಯ ಮಂಡನೆ ಮಾಡುವರು, ರೈತ ಹೋರಾಟಗಾರರಾದ ಬಡಗಲಪುರ ನಾಗೇಂದ್ರ, ಕುರುಬೂರು ಶಾಂತಕುಮಾರ್, ಸುಣಮದ ಜಯರಾಮ್, ಕೆ.ಬೋರಯ್ಯ, ಅಂಜನರೆಡ್ಡಿ, ಬಿಜ್ಜಾವರ ಹೆಚ್ ಲೋಕೇಶ್ ವಿಷಯ ಮಂಡನೆಯಲ್ಲಿ ಭಾಗವಹಿಸುವರು ಎಂದು ವಿವರಿಸಿದರು.

ಸಂಜೆ ೦೪ಕ್ಕೆ ಸ್ಫಟಿಕಪುರಿ ಮಠದ ನಂಜಾವಧೂತ ಸ್ವಾಮೀಜಿ, ಮಾಧಾರಚೆನ್ನಯ್ಯ ಪೀಠದ ಮಾದಾರ ಚೆನ್ನಯ್ಯ ಸ್ವಾಮೀಜಿ ದಿವ್ಯ ಸಾನಿಧ್ಯದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಜಿ.ಪರಮೇಶ್ವರ್, ಕೇಂದ್ರ ರೈಲ್ವ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ, ಲೋಕಸಭಾ ಸದಸ್ಯ ಶ್ರೇಯಸ್ ಪಟೇಲ್, ವಕೀಲರ ಸಂಘದ ಉಪಾಧ್ಯಕ್ಷ ಗಿರೀಶ್ ಕುಮಾರ್ ಸಿ.ಎಸ್ ಭಾಗವಹಿಸಲಿದ್ದು, ಸಮಿತಿಯ ಪದಾಧಿಕಾರಿಗಳು ಉಪಸ್ಥಿತರರಿಲಿದ್ದಾರೆ ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಸಮಿತಿಯ ಕಾರ್ಯಧ್ಯಕ್ಷರಾದ ಸಿಡಿ ಗಂಗಾಧರ್, ಎಸ್.ಸಿದ್ದರಾಮೇಗೌಡ, ಅಶೋಕ್ ಜಯರಾಮ್, ಸದಸ್ಯರಾದ ಚಿದಂಬರ್, ನಗರಸಭೆ ಮಾಜಿ ಸದಸ್ಯೆ ಪದ್ಮವತಿ, ಸಾತನೂರು ವೇಣು, ಜಗದೀಶ್ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

2 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

2 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

2 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

2 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

2 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

2 hours ago