ಮಂಡ್ಯ

ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರ : ಪ್ರತಿಭಟನೆಗೆ ನಿರ್ಮಲಾನಂದ ಸ್ವಾಮೀಜಿ ಸಾಥ್

ಮಂಡ್ಯ: ಮಂಡ್ಯದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಸ್ವಾಮೀಜಿಗಳು, ನಟರು ಸೇರಿದಂತೆ ಪ್ರಭಾವಿ ವ್ಯಕ್ತಿಗಳೂ ಕೂಡಾ ಕಾವೇರಿ ಹೋರಾಟಕ್ಕೆ ಸಾಥ್ ನೀಡಿದ್ದಾರೆ.

ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಹಿನ್ನಲೆ ಗುರುವಾರದಿಂದಲೂ ಪ್ರತಿಭಟನೆ ನಡೆಯುತ್ತಿದೆ. ಇಂದು ಪ್ರತಿಭಟನೆ ತೀವ್ರತೆ ಹೆಚ್ಚಾಗಿದ್ದು, ಸೆಸ್ಟೆಂಬರ್ 23 ರಂದು ಮಂಡ್ಯ ಬಂದ್‌ಗೂ ಕರೆ ನಿಡಲಾಗಿದೆ.

ಬೆಂಗಳೂರು ಜಲಮಂಡಳಿಗೆ ಮುತ್ತಿಗೆ : ಕನ್ನಡ ಸಂಘಟನೆಗಳ ಪ್ರತಿಭಟನಾಕಾರರು ಇಂದು ಬೆಂಗಳೂರು ಜಲಮಂಡಳಿಗೆ ಕನ್ನಡಪರ ಸಂಘಟನೆ ಮುತ್ತಿಗೆ ಹಾಕಿದರು.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿರುವ ಬೆಂಗಳೂರು ಜಲಮಂಡಳಿ ಕೇಂದ್ರಕ್ಕೆ ಮುತ್ತಿಗೆ ಹಾಕಿ ಘೋಷಣೆ ಕೂಗಿದರು. ಬೆಂಗಳೂರಿಗೆ ನೀರು ಸರಬರಾಜು ಆಗುವ ಕೇಂದ್ರದ ಬಳಿ ಜಮಾಯಿಸಿದ ಕಾವೇರಿ ಹೋರಾಟ ಸಮಿತಿ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಇದೇ ವೇಳೆ ಬೆಂಗಳೂರಿಗರ ಮೇಲೂ ಆಕ್ರೋಶ ಹೊರಹಾಕಿದ ಹೋರಾಟಗಾರರು ಬೆಂಗಳೂರಿನ ಜನರು ಕಾವೇರಿ ನೀರಿನ ವಿಚಾರದಲ್ಲಿ ಧ್ವನಿ ಎತ್ತುತ್ತಿಲ್ಲ. ಕುಡಿಯಲು ನೀರು ಕೊಡದಿದ್ದರೆ ಅವರು ಬೀದಿಗೆ ಬಂದು ಹೋರಾಟ ಮಾಡ್ತಾರೆ. ಕಾವೇರಿ ನೀರಿನ ಅವಶ್ಯಕತೆ ಎಲ್ಲರಿಗೂ ಇದೆ ಎಲ್ಲರು ಹೋರಾಟಕ್ಕೆ ಬಂದು ರೈತರಿಗೆ ಬೆಂಬಲ ನೀಡಬೇಕು. ತಮಿಳುನಾಡಿಗೆ ಹೊಗುತ್ತಿರುವ ನೀರನ್ನ ತಕ್ಷಣವೇ ರಾಜ್ಯ ಸರ್ಕಾರ ನಿಲ್ಲಿಸಬೇಕು. ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.

ಕಾವೇರಿ ಹೋರಾಟಕ್ಕೆ ಚುಂಚಶ್ರೀ ನಿರ್ಮಲಾನಂದನಾಥ ಸ್ವಾಮೀಜಿ : ಇಂದಿನ ಕಾವೇರಿ ಹೋರಾಟದ ಭಾಗವಾಗಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆಯುತ್ತಿರುವ ಧರಣಿಯಲ್ಲಿ ಭಾಗಿಯಾಗಲು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಹಾಗೂ ವಿವಿಧ ಶಾಖೆಗಳ ಶಾಖಾ ಮಠಾಧೀಶರು ಆಗಮಿಸಿ, ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಗೆ ಸಾಥ್ ನೀಡಿದ್ದಾರೆ.

ಹೋರಾಟಗಾರರನ್ನ ವಶಕ್ಕೆ ಪಡೆದ ಪೊಲೀಸರು‌ : ಮಳವಳ್ಳಿಯಲ್ಲಿರುವ ಬೆಂಗಳೂರು ಜಲಮಂಡಳಿಗೆ ಮುತ್ತಿಗೆ ಹಾಕಿದ್ದ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಕೆಲ ಹೊತ್ತಿನ ಬಳಿಕ ಪೊಲೀಸರು ವಶಕ್ಕೆ ಪಡೆದರು.

andolanait

Recent Posts

ಸಾವಿರಾರು ಸೈನಿಕರ ಜೀವನ್ಮರಣದ ಪ್ರಶ್ನೆಯಾಗಿತ್ತು

ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್‌ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್‌ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…

13 seconds ago

ಸಹಸ್ರಾರು ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಅಮಾನ್ಯ

ಬೋಗಸ್ ಕಾರ್ಡ್ ಹೆಸರಿನಲ್ಲಿ ಕ್ರಮ; ನೈಜ ಕಾರ್ಮಿಕರಿಗೆ ಸಮಸ್ಯೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ…

12 mins ago

ದೇವರಗುಡ್ಡನಾಗಬೇಕಿದ್ದ ದುಂಡು ಮಾದೇವಸ್ವಾಮಿ ಚಿತ್ರಗಾರನಾದ ವೃತ್ತಾಂತ

ಸ್ವಾಮಿ ಪೊನ್ನಾಚಿ ದಿನಬೆಳಗಾದರೆ ಮಾದಪ್ಪ, ಮಂಟೇಸ್ವಾಮಿಯ ಹಾಡು ಹಾಡಿಕೊಂಡು ಬರುವ ಜನಪದರ ದಂಡು. ಸುತ್ತಮುತ್ತ ದೇವರಗುಡ್ಡ ನೀಲಗಾರರ ಹಿಂಡು. ಊರೂರಿ…

17 mins ago

ಅಪ್ಪಾಜಿಯ ವಾತ್ಸಲ್ಯದ ಛಡಿಯೇಟಿನ ‘ಪಾಠ’ಗಳು ನೆನಪಾಗುತ್ತಿವೆ…

ರವಿ ಕೋಟಿ ಬಾಲ್ಯದಲ್ಲಿ ನಾನು ಕಂಟ್ರೋಲಿಗೆ ಬರದಷ್ಟು ತುಂಟನಾಗಿದ್ದೆ. ಯಾರೂ ನನ್ನನ್ನು ಕಂಟ್ರೋಲ್ ಮಾಡಲಾಗುತ್ತಿರಲಿಲ್ಲ. ಯಾಕೆಂದರೆ ನಾನೇ ನನ್ನ ಕಂಟ್ರೋಲಿನಲ್ಲಿ…

22 mins ago

ಹೀಗಾದರೂ ಆದರೆ ಭ್ರಮೆಗಳು ಕರಗಿ ಆಧ್ಯಾತ್ಮಿಕ ವಿನಯದ ಪರಿಚಯವಾಗಬಹುದೇನೋ…

ಸುಕನ್ಯಾ ಕನಾರಳ್ಳಿ ಒಂದು ಮಠ. ಅಲ್ಲಿ ಮರಿಸ್ವಾಮಿಯಾಗಿದ್ದವರು ಪೀಠಾಧಿಪತಿ ತೀರಿಕೊಂಡ ಮೇಲೆ ಏನೇನೋ ಕಾರಣಗಳ ದೆಸೆಯಿಂದ ಪೀಠವನ್ನು ಏರಲು ಆಗದೆ…

29 mins ago

ಅಳಿಯುತ್ತಿರುವ ಸೋಬಾನೆ ಹಾಡುಗಳ ಕಲಿಸುತ್ತಿರುವ ಕಲೆಗಾರ

ಡಾ.ಮೈಸೂರು ಉಮೇಶ್ ಸೋಬಾನೆ ಪದಗಳು ಗ್ರಾಮೀಣ ಮಹಿಳೆಯರಿಗೆ ಒಲಿದು ಬಂದಿರುವ ಜನಪದ ಗಾಯನ ಪ್ರಕಾರ. ಇದಕ್ಕೆ ಅಪವಾದವೆಂಬಂತೆ ಮಂಡ್ಯ ಜಿಲ್ಲೆಯ…

33 mins ago