ಮಂಡ್ಯ

ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರ : ಪ್ರತಿಭಟನೆಗೆ ನಿರ್ಮಲಾನಂದ ಸ್ವಾಮೀಜಿ ಸಾಥ್

ಮಂಡ್ಯ: ಮಂಡ್ಯದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಸ್ವಾಮೀಜಿಗಳು, ನಟರು ಸೇರಿದಂತೆ ಪ್ರಭಾವಿ ವ್ಯಕ್ತಿಗಳೂ ಕೂಡಾ ಕಾವೇರಿ ಹೋರಾಟಕ್ಕೆ ಸಾಥ್ ನೀಡಿದ್ದಾರೆ.

ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದ ಹಿನ್ನಲೆ ಗುರುವಾರದಿಂದಲೂ ಪ್ರತಿಭಟನೆ ನಡೆಯುತ್ತಿದೆ. ಇಂದು ಪ್ರತಿಭಟನೆ ತೀವ್ರತೆ ಹೆಚ್ಚಾಗಿದ್ದು, ಸೆಸ್ಟೆಂಬರ್ 23 ರಂದು ಮಂಡ್ಯ ಬಂದ್‌ಗೂ ಕರೆ ನಿಡಲಾಗಿದೆ.

ಬೆಂಗಳೂರು ಜಲಮಂಡಳಿಗೆ ಮುತ್ತಿಗೆ : ಕನ್ನಡ ಸಂಘಟನೆಗಳ ಪ್ರತಿಭಟನಾಕಾರರು ಇಂದು ಬೆಂಗಳೂರು ಜಲಮಂಡಳಿಗೆ ಕನ್ನಡಪರ ಸಂಘಟನೆ ಮುತ್ತಿಗೆ ಹಾಕಿದರು.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿರುವ ಬೆಂಗಳೂರು ಜಲಮಂಡಳಿ ಕೇಂದ್ರಕ್ಕೆ ಮುತ್ತಿಗೆ ಹಾಕಿ ಘೋಷಣೆ ಕೂಗಿದರು. ಬೆಂಗಳೂರಿಗೆ ನೀರು ಸರಬರಾಜು ಆಗುವ ಕೇಂದ್ರದ ಬಳಿ ಜಮಾಯಿಸಿದ ಕಾವೇರಿ ಹೋರಾಟ ಸಮಿತಿ ತಮಿಳುನಾಡಿಗೆ ನೀರು ಬಿಟ್ಟಿರುವುದನ್ನ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಇದೇ ವೇಳೆ ಬೆಂಗಳೂರಿಗರ ಮೇಲೂ ಆಕ್ರೋಶ ಹೊರಹಾಕಿದ ಹೋರಾಟಗಾರರು ಬೆಂಗಳೂರಿನ ಜನರು ಕಾವೇರಿ ನೀರಿನ ವಿಚಾರದಲ್ಲಿ ಧ್ವನಿ ಎತ್ತುತ್ತಿಲ್ಲ. ಕುಡಿಯಲು ನೀರು ಕೊಡದಿದ್ದರೆ ಅವರು ಬೀದಿಗೆ ಬಂದು ಹೋರಾಟ ಮಾಡ್ತಾರೆ. ಕಾವೇರಿ ನೀರಿನ ಅವಶ್ಯಕತೆ ಎಲ್ಲರಿಗೂ ಇದೆ ಎಲ್ಲರು ಹೋರಾಟಕ್ಕೆ ಬಂದು ರೈತರಿಗೆ ಬೆಂಬಲ ನೀಡಬೇಕು. ತಮಿಳುನಾಡಿಗೆ ಹೊಗುತ್ತಿರುವ ನೀರನ್ನ ತಕ್ಷಣವೇ ರಾಜ್ಯ ಸರ್ಕಾರ ನಿಲ್ಲಿಸಬೇಕು. ದಿಟ್ಟ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.

ಕಾವೇರಿ ಹೋರಾಟಕ್ಕೆ ಚುಂಚಶ್ರೀ ನಿರ್ಮಲಾನಂದನಾಥ ಸ್ವಾಮೀಜಿ : ಇಂದಿನ ಕಾವೇರಿ ಹೋರಾಟದ ಭಾಗವಾಗಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆಯುತ್ತಿರುವ ಧರಣಿಯಲ್ಲಿ ಭಾಗಿಯಾಗಲು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಹಾಗೂ ವಿವಿಧ ಶಾಖೆಗಳ ಶಾಖಾ ಮಠಾಧೀಶರು ಆಗಮಿಸಿ, ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಗೆ ಸಾಥ್ ನೀಡಿದ್ದಾರೆ.

ಹೋರಾಟಗಾರರನ್ನ ವಶಕ್ಕೆ ಪಡೆದ ಪೊಲೀಸರು‌ : ಮಳವಳ್ಳಿಯಲ್ಲಿರುವ ಬೆಂಗಳೂರು ಜಲಮಂಡಳಿಗೆ ಮುತ್ತಿಗೆ ಹಾಕಿದ್ದ ಕನ್ನಡಪರ ಸಂಘಟನೆ ಕಾರ್ಯಕರ್ತರನ್ನು ಕೆಲ ಹೊತ್ತಿನ ಬಳಿಕ ಪೊಲೀಸರು ವಶಕ್ಕೆ ಪಡೆದರು.

andolanait

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

21 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

21 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

21 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

21 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

21 hours ago