ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಗುತ್ತಿಗೆದಾರರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ನಗರದ ಲೋಕೋಪಯೋಗಿ ಕಚೇರಿ ಆವರಣದಿಂದ ಮೆರವಣಿಗೆ ಹೊರಟು ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಕೇಂದ್ರ ರಾಜ್ಯ ಸರ್ಕಾರ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶಿಸಿದರು.
ಜಿಲ್ಲಾ ರೈತ ಇತರ ಕ್ಷಣ ಸಮಿತಿ ನಡೆಸುತ್ತಿರುವ ನಿರಂತರ ಧರಣಿ ಸ್ಥಳಕ್ಕೆ ತೆರಳಿ ಕಾವೇರಿ ಹೋರಾಟ ಬೆಂಬಲ ಸೂಚಿಸಿದ ಪ್ರತಿಭಟನಾ ನಿರತ ಗುತ್ತಿಗೆದಾರರು ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ನಿರಂತರ ಅನ್ಯಾಯ ವಾಗುತ್ತಿದ್ದು, ತಮಿಳುನಾಡಿಗೆ ನೀರು ಬಿಡುವ ಮೂಲಕ ರಾಜ್ಯ ಸರ್ಕಾರ ರೈತರಿಗೆ ದ್ರೋಹ ಮಾಡಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ತಕ್ಷಣ ನೆರೆ ರಾಜ್ಯಕ್ಕೆ ಹರಿಸುತ್ತಿರುವ ನೀರನ್ನು ತಕ್ಷಣ ನಿಲ್ಲಿಸಬೇಕು, ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡಿಕೊಡಬೇಕು. ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಸಿ ಪರಿಹಾರ ರೂಪಿಸಬೇಕು ಎಂದು ಒತ್ತಾಯಿಸಿದರು.
ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಡಿ. ಕೆಂಪಣ್ಣ, ಕಾರ್ಯಾಧ್ಯಕ್ಷ ಮಂಜುನಾಥ್, ಜಿಲ್ಲಾಧ್ಯಕ್ಷ ಯತಿರಾಜ್, ಮುಖಂಡರಾದ ನಾಗರಾಜು,ಕೃಷ್ಣೇಗೌಡ, ಆರ್.ನಾಗೇಶ್,ಮಾರುತಿ, ಸುನಿಲ್ ಬಾಬು,
ತ್ಯಾಗರಾಜ, ರವೀಂದ್ರ, ಕೆ.ಟಿ ಹನುಮಂತು ನೇತೃತ್ವ ವಹಿಸಿದ್ದರು.
ಹಾಸನ: ಜಿಲ್ಲೆಯ ವಿವಿಧೆಡೆ ಬಿರುಗಾಳಿ ಸಹಿತ ಭಾರೀ ಮಳೆಗೆ ಲಕ್ಷಾಂತರ ರೂ ಮೌಲ್ಯದ ಬಾಳೆ ಬೆಳೆ ನಾಶವಾಗಿದೆ. ಅರಕಲಗೂಡು ತಾಲ್ಲೂಕಿನ…
ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್…
ಕಠ್ಮಂಡು: ಜೀಪ್ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…
ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…
ಇಸ್ಲಾಮಾಬಾದ್: ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್ನ ಉನ್ನತ ಕಮಾಂಡರ್ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…
ನವದೆಹಲಿ: ಅಮೇರಿಕಾ-ಇರಾನ್ ಯುದ್ಧದ ಹೊರತಾಗಿಯೂ ಏಪ್ರಿಲ್.2026ರಲ್ಲಿ ಒಟ್ಟು ಜಿಎಸ್ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್ನಲ್ಲಿ…