ಮಂಡ್ಯ ; ಕಾವೇರಿ ಹಾಗೂ ಕಬಿನಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಕಾರಣ ಕಬಿನಿ ಮತ್ತು ಕೆಆರ್ ಎಸ್ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಗೆ ಬಿಡುಗಡೆ ಮಾಡಲಾಗಿದೆ. ಈ ಮೂಲಕವಾಗಿ ಕಾವೇರಿ ತಮಿಳುನಾಡಿನ ದಾಹ ತಣಿಸಿದ್ದಾಳೆ.
ಕೆಆರ್ ಎಸ್ ಜಲಾಶಯ ಭರ್ತಿಗೆ ಇನ್ನು ಕೇವಲ ೨ ಅಡಿಯಷ್ಟೇ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಕಾವೇರಿ ನದಿ ಮೂಲಕ ಹೊರಹರಿವಿನ ಪ್ರಮಾಣವನ್ನು ೫೦ ಸಾವಿರ ಕ್ಯೂಸೆಕ್ಗೆ ಏರಿಸಲಾಗಿದೆ. ಇದರಿಂದ ನದಿ ಮೂಲಕ ತಮಿಳುನಾಡಿಗೂ ಕೂಡ ಅಪಾರ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದೆ. ಅಲ್ಲದೆ ಜಲಾಶಯಕ್ಕೆ ಇನ್ನೂ ಎರಡು ಮೂರು ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ಬರುವ ನಿರೀಕ್ಷೆಯಿದ್ದು, ಹೊರಹರಿವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಲಿದೆ.
ಮೊನ್ನೆಯಷ್ಟೇ ತಮಿಳುನಾಡು ನಮಗೆ ಕಾವೇರಿ ನೀರು ಹರಿಸುತ್ತಿಲ್ಲ ಎಂದು ಕಾವೇರಿ ಪ್ರಾಧಿಕಾರದ ಮುಂದೆ ವಾದ ಮಂಡಿಸಿತ್ತು. ಈ ಹಿನ್ನೆಲೆ ಪ್ರಾಧಿಕಾರವು ಜುಲೈ ಅಂತ್ಯದವರೆಗೆ ಪ್ರತಿದಿನ ೧ ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುವಂತೆ ಕರ್ನಾಟಕಕ್ಕೆ ಸೂಚನೆ ನೀಡಿತ್ತು.ಆದ್ರೆ ಇತ್ತ ಸಿಎಂ ಸಿದ್ದರಾಮಯ್ಯ ಅವರು ಸರ್ವಪಕ್ಷಗಳ ಸಭೆ ನಡೆಸಿ ಅಷ್ಟೋಂದು ನೀರು ಬಿಡಲು ಆಗಲ್ಲ. ದಿನಕ್ಕೆ ೧೮೦೦ ಕ್ಯೂಸೆಕ್ ಮಾತ್ರ ಬಿಡುತ್ತೇವೆ ಎಂದು ತೀರ್ಮಾನ ಕೈಗೊಂಡಿದ್ದರು. ಆದರೆ ಈಗ ಎಲ್ಲೆಡೆ ಉತ್ತಮವಾದ ಮಳೆಯಾಗಿರುವ ಕಾರಣ ಕಾವೇರಿ ಒಡಲು ಬಹುತೇಕ ಭರ್ತಿಯಾಗಿದೆ. ಹೀಗಾಗಿ ತಮಿಳುನಾಡು ಕೇಳಿದ್ದಿಕಿಂತ ಹೆಚ್ಚಿನ ನೀರೇ ಹರಿದು ಹೋಗುತ್ತಿದೆ. ಈ ಮೂಲಕವಾಗಿ ತಮಿಳುನಾಡಿನ ನೀರಿನ ದಾಹವನ್ನು ಕಾವೇರಿ ಮಾತೆ ನೀಗಿಸಿದ್ದಾಳೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…