ಮಂಡ್ಯ

ತಮಿಳುನಾಡಿನ ದಾಹ ತಣಿಸಿದ ಕಾವೇರಿ ಮಾತೆ..!

ಮಂಡ್ಯ ; ಕಾವೇರಿ ಹಾಗೂ ಕಬಿನಿ ಜಲಾನಯನ  ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಕಾರಣ ಕಬಿನಿ ಮತ್ತು ಕೆಆರ್‌ ಎಸ್‌ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಗೆ ಬಿಡುಗಡೆ ಮಾಡಲಾಗಿದೆ. ಈ ಮೂಲಕವಾಗಿ ಕಾವೇರಿ ತಮಿಳುನಾಡಿನ ದಾಹ ತಣಿಸಿದ್ದಾಳೆ.

ಕೆಆರ್‌ ಎಸ್‌ ಜಲಾಶಯ ಭರ್ತಿಗೆ ಇನ್ನು ಕೇವಲ ೨ ಅಡಿಯಷ್ಟೇ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಕಾವೇರಿ ನದಿ ಮೂಲಕ ಹೊರಹರಿವಿನ ಪ್ರಮಾಣವನ್ನು ೫೦ ಸಾವಿರ ಕ್ಯೂಸೆಕ್‌ಗೆ ಏರಿಸಲಾಗಿದೆ. ಇದರಿಂದ  ನದಿ ಮೂಲಕ ತಮಿಳುನಾಡಿಗೂ ಕೂಡ ಅಪಾರ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದೆ. ಅಲ್ಲದೆ ಜಲಾಶಯಕ್ಕೆ ಇನ್ನೂ ಎರಡು  ಮೂರು ದಿನಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ಬರುವ ನಿರೀಕ್ಷೆಯಿದ್ದು, ಹೊರಹರಿವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಲಿದೆ.

ಮೊನ್ನೆಯಷ್ಟೇ ತಮಿಳುನಾಡು ನಮಗೆ ಕಾವೇರಿ ನೀರು ಹರಿಸುತ್ತಿಲ್ಲ ಎಂದು ಕಾವೇರಿ ಪ್ರಾಧಿಕಾರದ ಮುಂದೆ ವಾದ ಮಂಡಿಸಿತ್ತು. ಈ ಹಿನ್ನೆಲೆ ಪ್ರಾಧಿಕಾರವು ಜುಲೈ ಅಂತ್ಯದವರೆಗೆ ಪ್ರತಿದಿನ ೧ ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡುವಂತೆ ಕರ್ನಾಟಕಕ್ಕೆ ಸೂಚನೆ ನೀಡಿತ್ತು.ಆದ್ರೆ ಇತ್ತ ಸಿಎಂ ಸಿದ್ದರಾಮಯ್ಯ ಅವರು ಸರ್ವಪಕ್ಷಗಳ ಸಭೆ ನಡೆಸಿ ಅಷ್ಟೋಂದು ನೀರು ಬಿಡಲು ಆಗಲ್ಲ. ದಿನಕ್ಕೆ ೧೮೦೦ ಕ್ಯೂಸೆಕ್‌ ಮಾತ್ರ ಬಿಡುತ್ತೇವೆ ಎಂದು ತೀರ್ಮಾನ ಕೈಗೊಂಡಿದ್ದರು. ಆದರೆ ಈಗ ಎಲ್ಲೆಡೆ ಉತ್ತಮವಾದ ಮಳೆಯಾಗಿರುವ ಕಾರಣ ಕಾವೇರಿ ಒಡಲು ಬಹುತೇಕ ಭರ್ತಿಯಾಗಿದೆ. ಹೀಗಾಗಿ ತಮಿಳುನಾಡು ಕೇಳಿದ್ದಿಕಿಂತ ಹೆಚ್ಚಿನ ನೀರೇ ಹರಿದು ಹೋಗುತ್ತಿದೆ. ಈ ಮೂಲಕವಾಗಿ ತಮಿಳುನಾಡಿನ ನೀರಿನ ದಾಹವನ್ನು ಕಾವೇರಿ ಮಾತೆ ನೀಗಿಸಿದ್ದಾಳೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

31 mins ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

1 hour ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

5 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

5 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

5 hours ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

5 hours ago