ಮಂಡ್ಯ: ಕಳೆದ ಬಾರಿ ಬರಗಾಲ ಎದುರಿಸಿದ್ದ ಕರ್ನಾಟಕಕ್ಕೆ ಈ ಬಾರಿ ವರುಣಾ ಕೃಪಾ ತೋರಿದ್ದಾನೆ. ಅದರಂತೆ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಕೆರೆ, ಕಟ್ಟೆ ಹಾಗೂ ಜಲಾಶಯಗಳಿಗೆ ಜೀವ ಕಳೆ ಬಂದಿದೆ.
ಡೆತ್ ಸ್ಟೋರೇಜ್ ತಲುಪಿದ್ದ ಕಾವೇರಿಗೆ ನೀರು ಹರಿದು ಬರುತ್ತಿದ್ದು, ಕಾವೇರಿ ಕೊಳ್ಳದ ಜನರಲ್ಲಿ ಸಂತಸ ಮನೆ ಮಾಡಿದೆ. ಈ ನಡುವೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿದೆ.
ಇಂದು(ಜು.11) ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಸಭೆಯಲ್ಲಿ ಇದೇ ಜುಲೈ 12 ರಿಂದ 31 ರವರೆಗೆ ಪ್ರತಿನಿತ್ಯ ತಮಿಳುನಾಡಿಗೆ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ ಆದೇಶ ಮಾಡಿದೆ.
ಸಭೆಯಲ್ಲಿ ವಾದ ಮಾಡಿದ ತಮಿಳುನಾಡು, ಕಳೆದ ವರ್ಷ ಕರ್ನಾಟಕ ಸರಿಯಾಗಿ ತಮಿಳುನಾಡಿಗೆ ನೀರು ಹರಿಸಿಲ್ಲ. ಪ್ರಸಕ್ತ ಜಲವರ್ಷದಲ್ಲಿ ಮುಂಗಾರು ಮಳೆ ಸಾಮಾನ್ಯವಾಗಿದೆ. ಕೆಆರ್ಎಸ್ ಡ್ಯಾಂನಲ್ಲಿ ನೀರು ಸಂಗ್ರಹವಾಗಿದೆ. ಹೀಗಾಗಿ ನೀರು ಬಿಡುವಂತೆ ಶಿಫಾರಸ್ಸು ಮಾಡುವಂತೆ ಸಿಡ್ಬ್ಲೂಆರ್ಸಿ ಗೆ ಮನವಿ ಮಾಡಿದೆ.
ಇದಕ್ಕೆ ಪ್ರತಿಯಾಗಿ ಕರ್ನಾಟಕವೂ ಸಹ ಕಾವೇರಿ ನೀರಿನ ಕೊರತೆ ಇದೆ. ರಾಜ್ಯಕ್ಕೆ ಶೇ28 ರಷ್ಟು ಮಳೆ ಕೊರತೆಯಾಗಿದೆ. ಹೀಗಾಗಿ ನೀರು ಬಿಡಲು ಆಗುವುದಿಲ್ಲ. ಈಗಲೇ ನೀರು ಬಿಡುವಂತೆ ಶಿಫಾರಸ್ಸು ಮಾಡಬೇಡಿ ಎಂದು ಮನವಿ ಮಾಡಿತು.
ಎರಡು ರಾಜ್ಯಗಳ ವಾದ-ಪ್ರತಿವಾದ ಆಲಿಸಿದ ಸಿಡ್ಬ್ಲೂಆರ್ಸಿ, ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿ ಆದೇಶ ಹೊರಡಿಸಿದೆ.
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…
ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…
ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್ಗೆ ನಾವು ನೋಟಿಸ್ ಕೊಡಲು…