ಮಂಡ್ಯ

ತಮಿಳುನಾಡಿಗೆ ಕಾವೇರಿ ನೀರು: ನಿತ್ಯ 1 ಟಿಎಂಸಿ ಹರಿಸಲು ಶಿಫಾರಸು

ಮಂಡ್ಯ: ಕಳೆದ ಬಾರಿ ಬರಗಾಲ ಎದುರಿಸಿದ್ದ ಕರ್ನಾಟಕಕ್ಕೆ ಈ ಬಾರಿ ವರುಣಾ ಕೃಪಾ ತೋರಿದ್ದಾನೆ. ಅದರಂತೆ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಕೆರೆ, ಕಟ್ಟೆ ಹಾಗೂ ಜಲಾಶಯಗಳಿಗೆ ಜೀವ ಕಳೆ ಬಂದಿದೆ.

ಡೆತ್‌ ಸ್ಟೋರೇಜ್‌ ತಲುಪಿದ್ದ ಕಾವೇರಿಗೆ ನೀರು ಹರಿದು ಬರುತ್ತಿದ್ದು, ಕಾವೇರಿ ಕೊಳ್ಳದ ಜನರಲ್ಲಿ ಸಂತಸ ಮನೆ ಮಾಡಿದೆ. ಈ ನಡುವೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿದೆ.

ಇಂದು(ಜು.11) ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಸಭೆಯಲ್ಲಿ ಇದೇ ಜುಲೈ 12 ರಿಂದ 31 ರವರೆಗೆ ಪ್ರತಿನಿತ್ಯ ತಮಿಳುನಾಡಿಗೆ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ ಆದೇಶ ಮಾಡಿದೆ.

ಸಭೆಯಲ್ಲಿ ವಾದ ಮಾಡಿದ ತಮಿಳುನಾಡು, ಕಳೆದ ವರ್ಷ ಕರ್ನಾಟಕ ಸರಿಯಾಗಿ ತಮಿಳುನಾಡಿಗೆ ನೀರು ಹರಿಸಿಲ್ಲ. ಪ್ರಸಕ್ತ ಜಲವರ್ಷದಲ್ಲಿ ಮುಂಗಾರು ಮಳೆ ಸಾಮಾನ್ಯವಾಗಿದೆ. ಕೆಆರ್‌ಎಸ್‌ ಡ್ಯಾಂನಲ್ಲಿ ನೀರು ಸಂಗ್ರಹವಾಗಿದೆ. ಹೀಗಾಗಿ ನೀರು ಬಿಡುವಂತೆ ಶಿಫಾರಸ್ಸು ಮಾಡುವಂತೆ ಸಿಡ್ಬ್ಲೂಆರ್‌ಸಿ ಗೆ ಮನವಿ ಮಾಡಿದೆ.

ಇದಕ್ಕೆ ಪ್ರತಿಯಾಗಿ ಕರ್ನಾಟಕವೂ ಸಹ ಕಾವೇರಿ ನೀರಿನ ಕೊರತೆ ಇದೆ. ರಾಜ್ಯಕ್ಕೆ ಶೇ28 ರಷ್ಟು ಮಳೆ ಕೊರತೆಯಾಗಿದೆ. ಹೀಗಾಗಿ ನೀರು ಬಿಡಲು ಆಗುವುದಿಲ್ಲ. ಈಗಲೇ ನೀರು ಬಿಡುವಂತೆ ಶಿಫಾರಸ್ಸು ಮಾಡಬೇಡಿ ಎಂದು ಮನವಿ ಮಾಡಿತು.

ಎರಡು ರಾಜ್ಯಗಳ ವಾದ-ಪ್ರತಿವಾದ ಆಲಿಸಿದ ಸಿಡ್ಬ್ಲೂಆರ್‌ಸಿ, ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿ ಆದೇಶ ಹೊರಡಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

3 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

3 hours ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

8 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

8 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

8 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

8 hours ago