ಮಂಡ್ಯ: ಕಳೆದ ಬಾರಿ ಬರಗಾಲ ಎದುರಿಸಿದ್ದ ಕರ್ನಾಟಕಕ್ಕೆ ಈ ಬಾರಿ ವರುಣಾ ಕೃಪಾ ತೋರಿದ್ದಾನೆ. ಅದರಂತೆ ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಕೆರೆ, ಕಟ್ಟೆ ಹಾಗೂ ಜಲಾಶಯಗಳಿಗೆ ಜೀವ ಕಳೆ ಬಂದಿದೆ.
ಡೆತ್ ಸ್ಟೋರೇಜ್ ತಲುಪಿದ್ದ ಕಾವೇರಿಗೆ ನೀರು ಹರಿದು ಬರುತ್ತಿದ್ದು, ಕಾವೇರಿ ಕೊಳ್ಳದ ಜನರಲ್ಲಿ ಸಂತಸ ಮನೆ ಮಾಡಿದೆ. ಈ ನಡುವೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿದೆ.
ಇಂದು(ಜು.11) ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿರ್ವಹಣಾ ಸಭೆಯಲ್ಲಿ ಇದೇ ಜುಲೈ 12 ರಿಂದ 31 ರವರೆಗೆ ಪ್ರತಿನಿತ್ಯ ತಮಿಳುನಾಡಿಗೆ 1 ಟಿಎಂಸಿ ಕಾವೇರಿ ನೀರು ಹರಿಸುವಂತೆ ಆದೇಶ ಮಾಡಿದೆ.
ಸಭೆಯಲ್ಲಿ ವಾದ ಮಾಡಿದ ತಮಿಳುನಾಡು, ಕಳೆದ ವರ್ಷ ಕರ್ನಾಟಕ ಸರಿಯಾಗಿ ತಮಿಳುನಾಡಿಗೆ ನೀರು ಹರಿಸಿಲ್ಲ. ಪ್ರಸಕ್ತ ಜಲವರ್ಷದಲ್ಲಿ ಮುಂಗಾರು ಮಳೆ ಸಾಮಾನ್ಯವಾಗಿದೆ. ಕೆಆರ್ಎಸ್ ಡ್ಯಾಂನಲ್ಲಿ ನೀರು ಸಂಗ್ರಹವಾಗಿದೆ. ಹೀಗಾಗಿ ನೀರು ಬಿಡುವಂತೆ ಶಿಫಾರಸ್ಸು ಮಾಡುವಂತೆ ಸಿಡ್ಬ್ಲೂಆರ್ಸಿ ಗೆ ಮನವಿ ಮಾಡಿದೆ.
ಇದಕ್ಕೆ ಪ್ರತಿಯಾಗಿ ಕರ್ನಾಟಕವೂ ಸಹ ಕಾವೇರಿ ನೀರಿನ ಕೊರತೆ ಇದೆ. ರಾಜ್ಯಕ್ಕೆ ಶೇ28 ರಷ್ಟು ಮಳೆ ಕೊರತೆಯಾಗಿದೆ. ಹೀಗಾಗಿ ನೀರು ಬಿಡಲು ಆಗುವುದಿಲ್ಲ. ಈಗಲೇ ನೀರು ಬಿಡುವಂತೆ ಶಿಫಾರಸ್ಸು ಮಾಡಬೇಡಿ ಎಂದು ಮನವಿ ಮಾಡಿತು.
ಎರಡು ರಾಜ್ಯಗಳ ವಾದ-ಪ್ರತಿವಾದ ಆಲಿಸಿದ ಸಿಡ್ಬ್ಲೂಆರ್ಸಿ, ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಿ ಆದೇಶ ಹೊರಡಿಸಿದೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…