ಮಂಡ್ಯ

ತಮಿಳುನಾಡಿಗೆ ಕಾವೇರಿ ನೀರು : ಬಾಯಿ ಬಡಿದುಕೊಂಡು ರೈತರ ಪ್ರತಿಭಟನೆ

ಮಂಡ್ಯ : ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂ ಸೆಕ್ ನೀರು ಬಿಡುಗಡೆ ಮಾಡಬೇಕೆಂದು ಕಾವೇರಿ ನೀರು ನದಿ ಪ್ರಾಧಿಕಾರ ಆದೇಶ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ರೈತ ರಕ್ಷಣಾ ಸಮಿತಿ ನಡೆಸುತ್ತಿರುವ ಪ್ರತಿಭಟನಾ ಧರಣಿ ಎರಡನೇ ದಿನವೂ ಮುಂದುವರೆದಿದ್ದು ಬಾಯಿ ಬಡಿದು ಕೊಂಡು ಕಾವೇರಿ ನದಿ ನೀರಿನ ವಿಚಾರದಲ್ಲಿ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿದರು.

ನಗರದ ಸರ್ ಎಂವಿ ಪ್ರತಿಮೆ ಎದುರು ರೈತರು,ಕನ್ನಡ ಹೋರಾಟಗಾರರು ಸೇರಿ ವಿವಿಧ ಸಂಘ-ಸಂಸ್ಥೆಗಳ ಕಾರ್ಯಕರ್ತರು ಅಯ್ಯಯ್ಯೋ ಅನ್ಯಾಯ ಎಂದು ಬಾಯಿ ಬಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.

ನೀರು ಬಿಡುಗಡೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಸಂಕಷ್ಟ ಕಾಲದಲ್ಲಿ ಮಧ್ಯ ಪ್ರವೇಶ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ ಪ್ರತಿಭಟನಾಕಾರರು ಸಂಸದೆ ಸುಮಲತಾ ಅಂಬರೀಶ್ ಮತ್ತು ಜಿಲ್ಲೆಯ ಶಾಸಕರ ವಿರುದ್ಧ ಆಕ್ರೋಶಿಸಿದರು.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಒತ್ತಡ ತಂತ್ರದ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ಪ್ರಾಧಿಕಾರ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಆದೇಶ ಮಾಡಿರುವುದು ಅವ್ಯೆಜ್ಞಾನಿಕ, ಕಾವೇರಿ ಕೊಳ್ಳದ ಜಲಾಶಯಗಳಿಂದ ಹರಿಸುತ್ತಿರುವ ನೀರನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ತಮಿಳುನಾಡಿಗೆ 13 ಟಿಎಂಸಿ ನೀರು ಹರಿದುಹೋಗಿದೆ, ಇದೀಗ 7 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ. ಜಲಾಶಯದಲ್ಲಿ ನೀರಿನ ಪ್ರಮಾಣ ದಿನೇ ದಿನೇ ಕುಸಿತ ಕಾಣುತ್ತಿದ್ದು ಇದೇ ಪರಿಸ್ಥಿತಿ ಮುಂದುವರೆದರೆ ಬೆಳೆದು ನಿಂತಿರುವ ಬೆಳೆ ರಕ್ಷಣೆಗೆ ನೀರು ಬಿಡುವುದಿರಲಿ. ಕುಡಿಯುವ ನೀರು ಇಲ್ಲದಂತಾಗುತ್ತದೆ, ರಾಜ್ಯ ಕಾಂಗ್ರೆಸ್ ಸರ್ಕಾರದ ಕನ್ನಡಿಗರ ಬಗ್ಗೆಗಿನ ಆಲಸ್ಯ ಮತ್ತು ತಮಿಳುನಾಡು ಒಲೈಕೆಯ ಧೋರಣೆಯಿಂದ ಕರ್ನಾಟಕ ರಾಜ್ಯದ ರೈತರ ಬಲಿಪಶು ಆಗುತ್ತಿದ್ದಾರೆ ಎಂದು ಆರೋಪಿಸಿದರು.

ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಕೆ ಟಿ ಶ್ರೀಕಂಠೇಗೌಡ, ಸುನಂದಾ ಜಯರಾಮ್, ಬೇಕ್ರಿ ರಮೇಶ್, ಕೆ ಬೋರಯ್ಯ, ಕೀಲಾರ ಕೃಷ್ಣ, ಕನ್ನಡ ಸೇನೆ ಮಂಜುನಾಥ್, ಜಯ ಕರ್ನಾಟಕ ಯೋಗಣ್ಣ, ರೈತ ಸಂಘದ ಇಂಡುವಾಳು ಚಂದ್ರಶೇಖರ್.ಎಂ ಎಲ್ ತುಳಸೀದರ್. ಇಂಡುವಾಳು ಬಸವರಾಜ್, ಕರವೇ ಶಂಕರೇಗೌಡ ನೇತೃತ್ವ ವಹಿಸಿದ್ದರು.

lokesh

Recent Posts

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

1 hour ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

2 hours ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

3 hours ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

4 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

5 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

5 hours ago