ಮಂಡ್ಯ

ತಮಿಳುನಾಡಿಗೆ ಕಾವೇರಿ ನೀರು : ರೈತ ಹಿತರಕ್ಷಣಾ ಸಮಿತಿ ಪ್ರತಿಭಟನೆ

ಮಂಡ್ಯ : ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಕಾವೇರಿ ನೀರು ನದಿ ಪ್ರಾಧಿಕಾರ ಆದೇಶ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ರೈತ ರಕ್ಷಣಾ ಸಮಿತಿ ಮಂಡ್ಯದಲ್ಲಿ ಧರಣಿ ಆರಂಭಿಸಿದೆ.
ನಗರದ ಸರ್ ಎಂ ವಿ ಪ್ರತಿಮೆ ಎದುರು ಸಮಿತಿಯ ಆಶ್ರಯದಲ್ಲಿ ಮಾಜಿ ಶಾಸಕರು, ರೈತರು,ಕನ್ನಡ ಪರ ಹೋರಾಟಗಾರರು. ರಾಜಕೀಯ ಪಕ್ಷಗಳ ಕಾರ್ಯಕರ್ತರು ಸೇರಿ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಪ್ರತಿಭಟನಾ ಧರಣಿ ನಡೆಸಿದರು.

ಕಾವೇರಿ ನಮ್ಮದು, ರಕ್ತ ಕೊಟ್ಟರೂ ನೀರು ಬಿಡೆವು ಎಂಬ ಘೋಷವಾಕ್ಯ ದೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶಿಸಿದರು.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಒತ್ತಡ ತಂತ್ರದ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ಪ್ರಾಧಿಕಾರ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಆದೇಶ ಮಾಡಿರುವುದು ಅವ್ಯೆಜ್ಞಾನಿಕ, ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಜಲಾಶಯಗಳಿಂದ ನೀರು ಬಿಡುಗಡೆ ಮಾಡಬಾರದು ಎಂದು ಒತ್ತಾಯಿಸಿದರು.

ತಮಿಳುನಾಡಿಗೆ ಸತತವಾಗಿ ನೀರು ಹರಿಸಿದ ಪರಿಣಾಮ 113 ಅಡಿ ಇದ್ದ ನೀರು 101 ಅಡಿಗೆ ಕುಸಿದಿದೆ. ರೈತರು ಬೆಳೆದಿರುವ ಬೆಳೆ ರಕ್ಷಣೆಗೆ ನೀರು ಇಲ್ಲದಂತಾಗಿದೆ, ಪ್ರಾಧಿಕಾರದ ಆದೇಶದಂತೆ ಮತ್ತೆ ತಮಿಳುನಾಡಿಗೆ ನೀರು ಬಿಟ್ಟರೆ ಫಸಲು ರಕ್ಷಣೆ ಇರಲಿ ಕುಡಿಯುವ ನೀರು ಕೂಡ ನೀರು ಇರುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ಸರ್ಕಾರ ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಬಿಟ್ಟಿರುವುದರಿಂದ ಮಂಡ್ಯ, ಮೈಸೂರು, ಬೆಂಗಳೂರು ಸೇರಿ ಎಂಟು ನಗರಗಳಿಗೆ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಲಿದೆ, ತಕ್ಷಣ ಕಾವೇರಿ ನದಿಗೆ ಬಿಟ್ಟಿರುವ ನೀರನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಸರ್ಕಾರ ತಾಳ್ಮೆ ವಹಿಸಿ ತಮಿಳುನಾಡಿಗೆ ನೀರು ಬಿಡದೆ ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್ ಗೆ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡಲು ಮುಂದಾಗ ಬೇಕಿತ್ತು, ನೀರು ಬಿಟ್ಟ ಪರಿಣಾಮ ಮತ್ತು ಈಗಲೂ ನೀರು ಹರಿಸುತ್ತಿರುವ ಹಿನ್ನಲೆಯಲ್ಲಿ ಕೆ ಆರ್ ಎಸ್ ಜಲಾಶಯದಲ್ಲಿ ನೀರಿನ ಪ್ರಮಾಣ ಕುಸಿತ ಕಾಣುತ್ತಿದೆ ಎಂದು ತಿಳಿಸಿದರು.

ಕಾವೇರಿ ನದಿ ನೀರು ವಿಚಾರದಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಮಲತಾಯಿ ಧೋರಣೆ ಅನುಸರಿಸುತ್ತಾ ಬಂದಿದೆ, ಸಂಕಷ್ಟ ಬಂದಾಗ ಮಧ್ಯ ಪ್ರವೇಶಿಸಿ ಸಂಕಷ್ಟ ಸೂತ್ರ ಪಾಲಿಸಲು ಸೂಚನೆ ನೀಡುವುದಿಲ್ಲ,ಬದಲಾಗಿ ರಾಜ್ಯ ರಾಜ್ಯಗಳ ನಡುವೆ ಸಂಘರ್ಷ ಉಂಟುಮಾಡುತ್ತಿದೆ ಎಂದು ಕಿಡಿಕಾರಿದರು.

ಮೇಕೆದಾಟು ಯೋಜನೆಗೆ ಅಡ್ಡಿಪಡಿಸುವ ತಮಿಳುನಾಡು ಸರ್ಕಾರ ಕಾವೇರಿ ಜಲಾನಯನ ಪ್ರದೇಶದಲ್ಲಿ ನದಿ ಜೋಡಣೆ ಸೇರಿದಂತೆ ಹಲವು ನೀರಾವರಿ ಯೋಜನೆಗಳನ್ನು ಜಾರಿ ಮಾಡುತ್ತಿದೆ, ಕಾವೇರಿ ನದಿ ನೀರಿನ ಬಹು ಪಾಲನ್ನು ಪಡೆಯಲು ಒತ್ತಡ ತಂತ್ರ ಅನುಸರಿಸಿ ಕರ್ನಾಟಕ ವಿರೋಧಿ ಧೋರಣೆ ಮಾಡುತ್ತಿದೆ ಎಂದು ಆರೋಪಿಸಿದರು.

ಕಾವೇರಿ ನದಿ ಪಾತ್ರದಲ್ಲಿನ ವಾಸ್ತವ ಪರಿಸ್ಥಿತಿ ಅರಿಯಲು ಮತ್ತು ಜಲಾಶಯಗಳಲ್ಲಿ ಇರುವ ನೀರಿನ ಲಭ್ಯತೆ ಬಗ್ಗೆ ಪರಿಶೀಲಿಸಲು ಕೇಂದ್ರ ಸರ್ಕಾರ ನೀರಾವರಿ ತಜ್ಜರ ತಂಡವನ್ನು ಕರ್ನಾಟಕಕ್ಕೆ ಕಳುಹಿಸಿ ಕೊಡುವ ಮೂಲಕ ವಾಸ್ತವ ಸ್ಥಿತಿ ಅರಿಯಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಮಾಜಿ ಸಚಿವ ಎಂ ಎಸ್. ಆತ್ಮಾನಂದ,ಮಾಜಿ ಶಾಸಕ ಜಿ ಬಿ ಶಿವಕುಮಾರ್, ಕೆ ಟಿ ಶ್ರೀಕಂಠೇಗೌಡ, ಸುನಂದಾ ಜಯರಾಂ, ಬೇಕ್ರಿ ರಮೇಶ್, ಗುರುಪ್ರಸಾದ್ ಕೆರಗೋಡು, ಪ್ರಶಾಂತ ಬಾಬು, ಕೆ ಬೋರಯ್ಯ, ಅಂಬುಜಮ್ಮ, ಸಿದ್ದರಾಮೇಗೌಡ, ಬಿ.ಸಿ.ಶಿವಾನಂದ, ಅಂದಾನಿ ಸೋಮನಹಳ್ಳಿ, ಕನ್ನಡ ಸೇನೆ ಮಂಜುನಾಥ್, ಜಯ ಕರ್ನಾಟಕ ಯೋಗಣ್ಣ, ರೈತ ಸಂಘದ ಇಂಡುವಾಳು ಚಂದ್ರಶೇಖರ್.ಸಿ.ಎಂ ದ್ಯಾವಪ್ಪ, ಎಂ.ಬಿ ರಮೇಶ್,ಎಸ್ ಕೆ ಮೊಳ್ಳೆಗೌಡ. ಎಂ ಎಲ್ ತುಳಸೀದರ್. ಇಂಡುವಾಳು ಬಸವರಾಜ್ ನೇತೃತ್ವ ವಹಿಸಿದ್ದರು.

lokesh

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

3 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

3 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

3 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

4 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

4 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

5 hours ago