ಮಂಡ್ಯ

ತಮಿಳುನಾಡಿಗೆ ಕಾವೇರಿ ನೀರು : ರೈತ ಹಿತರಕ್ಷಣಾ ಸಮಿತಿ ಪ್ರತಿಭಟನೆ

ಮಂಡ್ಯ : ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಕಾವೇರಿ ನೀರು ನದಿ ಪ್ರಾಧಿಕಾರ ಆದೇಶ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ರೈತ ರಕ್ಷಣಾ ಸಮಿತಿ ಮಂಡ್ಯದಲ್ಲಿ ಧರಣಿ ಆರಂಭಿಸಿದೆ.
ನಗರದ ಸರ್ ಎಂ ವಿ ಪ್ರತಿಮೆ ಎದುರು ಸಮಿತಿಯ ಆಶ್ರಯದಲ್ಲಿ ಮಾಜಿ ಶಾಸಕರು, ರೈತರು,ಕನ್ನಡ ಪರ ಹೋರಾಟಗಾರರು. ರಾಜಕೀಯ ಪಕ್ಷಗಳ ಕಾರ್ಯಕರ್ತರು ಸೇರಿ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಪ್ರತಿಭಟನಾ ಧರಣಿ ನಡೆಸಿದರು.

ಕಾವೇರಿ ನಮ್ಮದು, ರಕ್ತ ಕೊಟ್ಟರೂ ನೀರು ಬಿಡೆವು ಎಂಬ ಘೋಷವಾಕ್ಯ ದೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚೆಲುವರಾಯಸ್ವಾಮಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶಿಸಿದರು.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಒತ್ತಡ ತಂತ್ರದ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ಪ್ರಾಧಿಕಾರ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಆದೇಶ ಮಾಡಿರುವುದು ಅವ್ಯೆಜ್ಞಾನಿಕ, ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಜಲಾಶಯಗಳಿಂದ ನೀರು ಬಿಡುಗಡೆ ಮಾಡಬಾರದು ಎಂದು ಒತ್ತಾಯಿಸಿದರು.

ತಮಿಳುನಾಡಿಗೆ ಸತತವಾಗಿ ನೀರು ಹರಿಸಿದ ಪರಿಣಾಮ 113 ಅಡಿ ಇದ್ದ ನೀರು 101 ಅಡಿಗೆ ಕುಸಿದಿದೆ. ರೈತರು ಬೆಳೆದಿರುವ ಬೆಳೆ ರಕ್ಷಣೆಗೆ ನೀರು ಇಲ್ಲದಂತಾಗಿದೆ, ಪ್ರಾಧಿಕಾರದ ಆದೇಶದಂತೆ ಮತ್ತೆ ತಮಿಳುನಾಡಿಗೆ ನೀರು ಬಿಟ್ಟರೆ ಫಸಲು ರಕ್ಷಣೆ ಇರಲಿ ಕುಡಿಯುವ ನೀರು ಕೂಡ ನೀರು ಇರುವುದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ಸರ್ಕಾರ ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಬಿಟ್ಟಿರುವುದರಿಂದ ಮಂಡ್ಯ, ಮೈಸೂರು, ಬೆಂಗಳೂರು ಸೇರಿ ಎಂಟು ನಗರಗಳಿಗೆ ಕುಡಿಯುವ ನೀರಿಗೂ ಹಾಹಾಕಾರ ಎದುರಾಗಲಿದೆ, ತಕ್ಷಣ ಕಾವೇರಿ ನದಿಗೆ ಬಿಟ್ಟಿರುವ ನೀರನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ಸರ್ಕಾರ ತಾಳ್ಮೆ ವಹಿಸಿ ತಮಿಳುನಾಡಿಗೆ ನೀರು ಬಿಡದೆ ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್ ಗೆ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಡಲು ಮುಂದಾಗ ಬೇಕಿತ್ತು, ನೀರು ಬಿಟ್ಟ ಪರಿಣಾಮ ಮತ್ತು ಈಗಲೂ ನೀರು ಹರಿಸುತ್ತಿರುವ ಹಿನ್ನಲೆಯಲ್ಲಿ ಕೆ ಆರ್ ಎಸ್ ಜಲಾಶಯದಲ್ಲಿ ನೀರಿನ ಪ್ರಮಾಣ ಕುಸಿತ ಕಾಣುತ್ತಿದೆ ಎಂದು ತಿಳಿಸಿದರು.

ಕಾವೇರಿ ನದಿ ನೀರು ವಿಚಾರದಲ್ಲಿ ಕೇಂದ್ರ ಸರ್ಕಾರ ನಿರಂತರವಾಗಿ ಮಲತಾಯಿ ಧೋರಣೆ ಅನುಸರಿಸುತ್ತಾ ಬಂದಿದೆ, ಸಂಕಷ್ಟ ಬಂದಾಗ ಮಧ್ಯ ಪ್ರವೇಶಿಸಿ ಸಂಕಷ್ಟ ಸೂತ್ರ ಪಾಲಿಸಲು ಸೂಚನೆ ನೀಡುವುದಿಲ್ಲ,ಬದಲಾಗಿ ರಾಜ್ಯ ರಾಜ್ಯಗಳ ನಡುವೆ ಸಂಘರ್ಷ ಉಂಟುಮಾಡುತ್ತಿದೆ ಎಂದು ಕಿಡಿಕಾರಿದರು.

ಮೇಕೆದಾಟು ಯೋಜನೆಗೆ ಅಡ್ಡಿಪಡಿಸುವ ತಮಿಳುನಾಡು ಸರ್ಕಾರ ಕಾವೇರಿ ಜಲಾನಯನ ಪ್ರದೇಶದಲ್ಲಿ ನದಿ ಜೋಡಣೆ ಸೇರಿದಂತೆ ಹಲವು ನೀರಾವರಿ ಯೋಜನೆಗಳನ್ನು ಜಾರಿ ಮಾಡುತ್ತಿದೆ, ಕಾವೇರಿ ನದಿ ನೀರಿನ ಬಹು ಪಾಲನ್ನು ಪಡೆಯಲು ಒತ್ತಡ ತಂತ್ರ ಅನುಸರಿಸಿ ಕರ್ನಾಟಕ ವಿರೋಧಿ ಧೋರಣೆ ಮಾಡುತ್ತಿದೆ ಎಂದು ಆರೋಪಿಸಿದರು.

ಕಾವೇರಿ ನದಿ ಪಾತ್ರದಲ್ಲಿನ ವಾಸ್ತವ ಪರಿಸ್ಥಿತಿ ಅರಿಯಲು ಮತ್ತು ಜಲಾಶಯಗಳಲ್ಲಿ ಇರುವ ನೀರಿನ ಲಭ್ಯತೆ ಬಗ್ಗೆ ಪರಿಶೀಲಿಸಲು ಕೇಂದ್ರ ಸರ್ಕಾರ ನೀರಾವರಿ ತಜ್ಜರ ತಂಡವನ್ನು ಕರ್ನಾಟಕಕ್ಕೆ ಕಳುಹಿಸಿ ಕೊಡುವ ಮೂಲಕ ವಾಸ್ತವ ಸ್ಥಿತಿ ಅರಿಯಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಮಾಜಿ ಸಚಿವ ಎಂ ಎಸ್. ಆತ್ಮಾನಂದ,ಮಾಜಿ ಶಾಸಕ ಜಿ ಬಿ ಶಿವಕುಮಾರ್, ಕೆ ಟಿ ಶ್ರೀಕಂಠೇಗೌಡ, ಸುನಂದಾ ಜಯರಾಂ, ಬೇಕ್ರಿ ರಮೇಶ್, ಗುರುಪ್ರಸಾದ್ ಕೆರಗೋಡು, ಪ್ರಶಾಂತ ಬಾಬು, ಕೆ ಬೋರಯ್ಯ, ಅಂಬುಜಮ್ಮ, ಸಿದ್ದರಾಮೇಗೌಡ, ಬಿ.ಸಿ.ಶಿವಾನಂದ, ಅಂದಾನಿ ಸೋಮನಹಳ್ಳಿ, ಕನ್ನಡ ಸೇನೆ ಮಂಜುನಾಥ್, ಜಯ ಕರ್ನಾಟಕ ಯೋಗಣ್ಣ, ರೈತ ಸಂಘದ ಇಂಡುವಾಳು ಚಂದ್ರಶೇಖರ್.ಸಿ.ಎಂ ದ್ಯಾವಪ್ಪ, ಎಂ.ಬಿ ರಮೇಶ್,ಎಸ್ ಕೆ ಮೊಳ್ಳೆಗೌಡ. ಎಂ ಎಲ್ ತುಳಸೀದರ್. ಇಂಡುವಾಳು ಬಸವರಾಜ್ ನೇತೃತ್ವ ವಹಿಸಿದ್ದರು.

lokesh

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

5 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

5 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

5 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

15 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

17 hours ago