ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆ ಸಮೀಪ ʻಕಾವೇರಿ ಆರತಿʼ ಕಾರ್ಯಕ್ರಮ ಆಯೋಜಿಸಲು ನಡೆಸುತ್ತಿದ್ದ ಪೂರ್ವ ಸಿದ್ದತಾ ಕಾಮಗಾರಿಯನ್ನು ಮಂಗಳವಾರ ಸ್ಥಗಿತಗೊಳಿಸಲಾಗಿದೆ.
ಕಾವೇರಿ ಆರತಿಯ ವೇದಿಕೆ ನಿರ್ಮಿಸಲು ಕಳೆದ ಮೂರು ದಿನಗಳಿಂದ ಸ್ಥಳ ಸಮತಟ್ಟು ಮಾಡುವ ಕೆಲಸ ನಡೆಯುತ್ತಿದೆ. ಇದಕ್ಕೆ ರೈತರು ಪ್ರಬಲವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಈ ಮಧ್ಯೆ ನಾಳೆ ಕೆಆರ್ಎಸ್ ಡ್ಯಾಂ ಬಳಿ ರೈತರು ಹಾಗೂ ಪ್ರಗತಿಪರ ಸಂಘಟನೆಗಳು ಕಾವೇರಿ ಆರತಿ ವಿರೋಧಿಸಿ ಪ್ರತಿಭಟನಾ ಸಭೆ ಹಮ್ಮಿಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಮಗಾರಿ ನಿಲ್ಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಲ್ಲದೇ, ಸಿದ್ಧತಾ ಕಾರ್ಯಕ್ರಮಗಳ ಕಾಮಗಾರಿಗಳನ್ನು ಸದ್ಯಕ್ಕೆ ನಿಲ್ಲಿಸುವಂತೆ ಮೇಲಾಧಿಕಾರಿಗಳು ಮೌಖಿಕವಾಗಿ ಸೂಚಿಸಿರುವುದಾಗಿ ಕಾವೇರಿ ನಿರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ಜಯಂತ್ ತಿಳಿಸಿದ್ದಾರೆ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…