ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆ ಸಮೀಪ ʻಕಾವೇರಿ ಆರತಿʼ ಕಾರ್ಯಕ್ರಮ ಆಯೋಜಿಸಲು ನಡೆಸುತ್ತಿದ್ದ ಪೂರ್ವ ಸಿದ್ದತಾ ಕಾಮಗಾರಿಯನ್ನು ಮಂಗಳವಾರ ಸ್ಥಗಿತಗೊಳಿಸಲಾಗಿದೆ.
ಕಾವೇರಿ ಆರತಿಯ ವೇದಿಕೆ ನಿರ್ಮಿಸಲು ಕಳೆದ ಮೂರು ದಿನಗಳಿಂದ ಸ್ಥಳ ಸಮತಟ್ಟು ಮಾಡುವ ಕೆಲಸ ನಡೆಯುತ್ತಿದೆ. ಇದಕ್ಕೆ ರೈತರು ಪ್ರಬಲವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಈ ಮಧ್ಯೆ ನಾಳೆ ಕೆಆರ್ಎಸ್ ಡ್ಯಾಂ ಬಳಿ ರೈತರು ಹಾಗೂ ಪ್ರಗತಿಪರ ಸಂಘಟನೆಗಳು ಕಾವೇರಿ ಆರತಿ ವಿರೋಧಿಸಿ ಪ್ರತಿಭಟನಾ ಸಭೆ ಹಮ್ಮಿಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಮಗಾರಿ ನಿಲ್ಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಲ್ಲದೇ, ಸಿದ್ಧತಾ ಕಾರ್ಯಕ್ರಮಗಳ ಕಾಮಗಾರಿಗಳನ್ನು ಸದ್ಯಕ್ಕೆ ನಿಲ್ಲಿಸುವಂತೆ ಮೇಲಾಧಿಕಾರಿಗಳು ಮೌಖಿಕವಾಗಿ ಸೂಚಿಸಿರುವುದಾಗಿ ಕಾವೇರಿ ನಿರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ಜಯಂತ್ ತಿಳಿಸಿದ್ದಾರೆ.
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ…
ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ…
ನವದೆಹಲಿ : ಬಿಹಾರದ ಮುಖ್ಯಮಂತ್ರಿ, ಜೆಡಿಯು ರಾಷ್ಟ್ರೀಯ ಅಧ್ಯಕ್ಷರೂ ಆದ ನಿತೀಶ್ ಕುಮಾರ್ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ…
ಚಿಕ್ಕಮಗಳೂರು : ಚಂದ್ರದ್ರೋಣ ಪರ್ವತಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕೇರಳದ 10ನೇ ತರಗತಿ ವಿದ್ಯಾರ್ಥಿನಿ…
ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…