ಮಂಡ್ಯ: ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರು ಜಿ.ಎಂ ಜೈವಿಕ ಬೀಜಗಳ ಸಂಬಂಧ ಸಮಾಲೋಚನೆ ಸಭೆ ನಡೆಸಿ ಬೆಳೆ ಬೆಳೆಯುವ ಸಂಬಂಧ ತೀರ್ಮಾನಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ್ದು, ಇದನ್ನು ಕೇಂದ್ರ ಸರ್ಕಾರ ತಿರಸ್ಕರಿಸಬೇಕು ಎಂದು ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತದ ಅಧ್ಯಕ್ಷ ಹಾಡ್ಯ ರಮೇಶ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿ.ಎಂ ಬೀಜಗಳು ಜೈವಿಕ ತಂತ್ರಜ್ಞಾನದಿಂದ ಬೀಜಗಳನ್ನು ಮಾಡುವ ವಿಧಾನ ಅನೈಸರ್ಗಿಕವಾಗಿದ್ದು, ಇದರಿಂದ ಬೆಳೆ ಬೆಳೆಯುವ ಭೂಮಿಯ ಮೇಲು ದುಷ್ಪರಿಣಾಮ ಬೀರಲಿದ್ದು, ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಬಾರದು ಎಂದು ಆಗ್ರಹಿಸಿದರು.
ಅಮೆರಿಕ ದೇಶದಲ್ಲಿಯೂ ಈ ರೀತಿಯ ಬೀಜಗಳಿಂದ ಬೆಳೆ ಬೆಳೆಯಲಾಗುತ್ತಿದ್ದು, ಇದನ್ನು ಪ್ರಾಣಿಗಳಿಗೆ ನೀಡಲು ಮತ್ತು ಉಪ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದ್ದು, ಸೇವನೆಗೆ ಯೋಗ್ಯವಲ್ಲದ ಸದರಿ ಬೀಜಗಳು ಆರೋಗ್ಯದ ಮೇಲೆ ದುಷ್ಪರಿಣಾ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಈ ಹಿಂದೆಯೂ ಬಿಟಿ ಹತ್ತಿ ತಳಿಯನ್ನು ಪರಿಚಯ ಮಾಡಿದ್ದು, ಸದರಿ ತಳಿಯಿಂದ ಸಾಕಷ್ಟು ಅನಾಹುತಗಳು, ರೈತರು ನಷ್ಟ ಅನುಭವಿಸುವಂತಹ ಸಂಗತಿಗಳು ನಡೆದು, ನಿರಂತರ ಹೋರಾಟದ ಫಲವಾಗಿ ಬಿಟಿ ಹತ್ತಿಯನ್ನು ಹಾಗೂ ಬಿಟಿ ಬದನೆಯನ್ನು ತಿರಸ್ಕರಿಸಿ ಹಿಮ್ಮೆಟ್ಟಿಸಲಾಯಿತು ಎಂದರು.
ಈಗ ಜಿಎಂ ಬೀಜಗಳನ್ನು ತಿರಸ್ಕರಿಸುವಂತೆ ಕಿಸಾನ್ ಸಂಘ ಪ್ರಸ್ತುತತೆಯಿರುವ ೬೦೦ ಜಿಲ್ಲೆಗಳ ಎಲ್ಲಾ ಸಂಸದರಿಗೆ ಮನವಿ ಸಲ್ಲಿಸಲಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರ ಅಧಿವೇಶನದಲ್ಲಿ ಇದನ್ನು ತಿರಸ್ಕರಿಸುವಂತೆ ಗಮನ ಸೆಳೆಯಲಾಗಿದೆ. ರಾಜ್ಯಸಭೆ, ಲೋಕಸಭೆಯ ಸಭಾಪತಿಗಳಿಯೂ ಪತ್ರ ಬರೆಯಲಾಗಿದ್ದು, ಫ್ಯಾಕ್ಸ್ ಮೂಲಕವೂ ಅವರ ಗಮನೆ ಸೆಳಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಪಣಕನಹಳ್ಳಿ ವೆಂಕಟೇಶ್, ಬೂದನೂರು ಅಪ್ಪಾಜಿ, ಪಾಪೇಗೌಡ, ಇಂದ್ರಮ್ಮ, ದುರ್ಗೇಶ್ ಇದ್ದರು.
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…