ಮಂಡ್ಯ: ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರು ಜಿ.ಎಂ ಜೈವಿಕ ಬೀಜಗಳ ಸಂಬಂಧ ಸಮಾಲೋಚನೆ ಸಭೆ ನಡೆಸಿ ಬೆಳೆ ಬೆಳೆಯುವ ಸಂಬಂಧ ತೀರ್ಮಾನಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ್ದು, ಇದನ್ನು ಕೇಂದ್ರ ಸರ್ಕಾರ ತಿರಸ್ಕರಿಸಬೇಕು ಎಂದು ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತದ ಅಧ್ಯಕ್ಷ ಹಾಡ್ಯ ರಮೇಶ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿ.ಎಂ ಬೀಜಗಳು ಜೈವಿಕ ತಂತ್ರಜ್ಞಾನದಿಂದ ಬೀಜಗಳನ್ನು ಮಾಡುವ ವಿಧಾನ ಅನೈಸರ್ಗಿಕವಾಗಿದ್ದು, ಇದರಿಂದ ಬೆಳೆ ಬೆಳೆಯುವ ಭೂಮಿಯ ಮೇಲು ದುಷ್ಪರಿಣಾಮ ಬೀರಲಿದ್ದು, ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಬಾರದು ಎಂದು ಆಗ್ರಹಿಸಿದರು.
ಅಮೆರಿಕ ದೇಶದಲ್ಲಿಯೂ ಈ ರೀತಿಯ ಬೀಜಗಳಿಂದ ಬೆಳೆ ಬೆಳೆಯಲಾಗುತ್ತಿದ್ದು, ಇದನ್ನು ಪ್ರಾಣಿಗಳಿಗೆ ನೀಡಲು ಮತ್ತು ಉಪ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದ್ದು, ಸೇವನೆಗೆ ಯೋಗ್ಯವಲ್ಲದ ಸದರಿ ಬೀಜಗಳು ಆರೋಗ್ಯದ ಮೇಲೆ ದುಷ್ಪರಿಣಾ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಈ ಹಿಂದೆಯೂ ಬಿಟಿ ಹತ್ತಿ ತಳಿಯನ್ನು ಪರಿಚಯ ಮಾಡಿದ್ದು, ಸದರಿ ತಳಿಯಿಂದ ಸಾಕಷ್ಟು ಅನಾಹುತಗಳು, ರೈತರು ನಷ್ಟ ಅನುಭವಿಸುವಂತಹ ಸಂಗತಿಗಳು ನಡೆದು, ನಿರಂತರ ಹೋರಾಟದ ಫಲವಾಗಿ ಬಿಟಿ ಹತ್ತಿಯನ್ನು ಹಾಗೂ ಬಿಟಿ ಬದನೆಯನ್ನು ತಿರಸ್ಕರಿಸಿ ಹಿಮ್ಮೆಟ್ಟಿಸಲಾಯಿತು ಎಂದರು.
ಈಗ ಜಿಎಂ ಬೀಜಗಳನ್ನು ತಿರಸ್ಕರಿಸುವಂತೆ ಕಿಸಾನ್ ಸಂಘ ಪ್ರಸ್ತುತತೆಯಿರುವ ೬೦೦ ಜಿಲ್ಲೆಗಳ ಎಲ್ಲಾ ಸಂಸದರಿಗೆ ಮನವಿ ಸಲ್ಲಿಸಲಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರ ಅಧಿವೇಶನದಲ್ಲಿ ಇದನ್ನು ತಿರಸ್ಕರಿಸುವಂತೆ ಗಮನ ಸೆಳೆಯಲಾಗಿದೆ. ರಾಜ್ಯಸಭೆ, ಲೋಕಸಭೆಯ ಸಭಾಪತಿಗಳಿಯೂ ಪತ್ರ ಬರೆಯಲಾಗಿದ್ದು, ಫ್ಯಾಕ್ಸ್ ಮೂಲಕವೂ ಅವರ ಗಮನೆ ಸೆಳಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಪಣಕನಹಳ್ಳಿ ವೆಂಕಟೇಶ್, ಬೂದನೂರು ಅಪ್ಪಾಜಿ, ಪಾಪೇಗೌಡ, ಇಂದ್ರಮ್ಮ, ದುರ್ಗೇಶ್ ಇದ್ದರು.
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…