ಮಂಡ್ಯ: ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರು ಜಿ.ಎಂ ಜೈವಿಕ ಬೀಜಗಳ ಸಂಬಂಧ ಸಮಾಲೋಚನೆ ಸಭೆ ನಡೆಸಿ ಬೆಳೆ ಬೆಳೆಯುವ ಸಂಬಂಧ ತೀರ್ಮಾನಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ್ದು, ಇದನ್ನು ಕೇಂದ್ರ ಸರ್ಕಾರ ತಿರಸ್ಕರಿಸಬೇಕು ಎಂದು ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತದ ಅಧ್ಯಕ್ಷ ಹಾಡ್ಯ ರಮೇಶ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿ.ಎಂ ಬೀಜಗಳು ಜೈವಿಕ ತಂತ್ರಜ್ಞಾನದಿಂದ ಬೀಜಗಳನ್ನು ಮಾಡುವ ವಿಧಾನ ಅನೈಸರ್ಗಿಕವಾಗಿದ್ದು, ಇದರಿಂದ ಬೆಳೆ ಬೆಳೆಯುವ ಭೂಮಿಯ ಮೇಲು ದುಷ್ಪರಿಣಾಮ ಬೀರಲಿದ್ದು, ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಬಾರದು ಎಂದು ಆಗ್ರಹಿಸಿದರು.
ಅಮೆರಿಕ ದೇಶದಲ್ಲಿಯೂ ಈ ರೀತಿಯ ಬೀಜಗಳಿಂದ ಬೆಳೆ ಬೆಳೆಯಲಾಗುತ್ತಿದ್ದು, ಇದನ್ನು ಪ್ರಾಣಿಗಳಿಗೆ ನೀಡಲು ಮತ್ತು ಉಪ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದ್ದು, ಸೇವನೆಗೆ ಯೋಗ್ಯವಲ್ಲದ ಸದರಿ ಬೀಜಗಳು ಆರೋಗ್ಯದ ಮೇಲೆ ದುಷ್ಪರಿಣಾ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಈ ಹಿಂದೆಯೂ ಬಿಟಿ ಹತ್ತಿ ತಳಿಯನ್ನು ಪರಿಚಯ ಮಾಡಿದ್ದು, ಸದರಿ ತಳಿಯಿಂದ ಸಾಕಷ್ಟು ಅನಾಹುತಗಳು, ರೈತರು ನಷ್ಟ ಅನುಭವಿಸುವಂತಹ ಸಂಗತಿಗಳು ನಡೆದು, ನಿರಂತರ ಹೋರಾಟದ ಫಲವಾಗಿ ಬಿಟಿ ಹತ್ತಿಯನ್ನು ಹಾಗೂ ಬಿಟಿ ಬದನೆಯನ್ನು ತಿರಸ್ಕರಿಸಿ ಹಿಮ್ಮೆಟ್ಟಿಸಲಾಯಿತು ಎಂದರು.
ಈಗ ಜಿಎಂ ಬೀಜಗಳನ್ನು ತಿರಸ್ಕರಿಸುವಂತೆ ಕಿಸಾನ್ ಸಂಘ ಪ್ರಸ್ತುತತೆಯಿರುವ ೬೦೦ ಜಿಲ್ಲೆಗಳ ಎಲ್ಲಾ ಸಂಸದರಿಗೆ ಮನವಿ ಸಲ್ಲಿಸಲಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರ ಅಧಿವೇಶನದಲ್ಲಿ ಇದನ್ನು ತಿರಸ್ಕರಿಸುವಂತೆ ಗಮನ ಸೆಳೆಯಲಾಗಿದೆ. ರಾಜ್ಯಸಭೆ, ಲೋಕಸಭೆಯ ಸಭಾಪತಿಗಳಿಯೂ ಪತ್ರ ಬರೆಯಲಾಗಿದ್ದು, ಫ್ಯಾಕ್ಸ್ ಮೂಲಕವೂ ಅವರ ಗಮನೆ ಸೆಳಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಪಣಕನಹಳ್ಳಿ ವೆಂಕಟೇಶ್, ಬೂದನೂರು ಅಪ್ಪಾಜಿ, ಪಾಪೇಗೌಡ, ಇಂದ್ರಮ್ಮ, ದುರ್ಗೇಶ್ ಇದ್ದರು.
ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…
ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…