ಮಂಡ್ಯ: ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರು ಜಿ.ಎಂ ಜೈವಿಕ ಬೀಜಗಳ ಸಂಬಂಧ ಸಮಾಲೋಚನೆ ಸಭೆ ನಡೆಸಿ ಬೆಳೆ ಬೆಳೆಯುವ ಸಂಬಂಧ ತೀರ್ಮಾನಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ್ದು, ಇದನ್ನು ಕೇಂದ್ರ ಸರ್ಕಾರ ತಿರಸ್ಕರಿಸಬೇಕು ಎಂದು ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತದ ಅಧ್ಯಕ್ಷ ಹಾಡ್ಯ ರಮೇಶ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿ.ಎಂ ಬೀಜಗಳು ಜೈವಿಕ ತಂತ್ರಜ್ಞಾನದಿಂದ ಬೀಜಗಳನ್ನು ಮಾಡುವ ವಿಧಾನ ಅನೈಸರ್ಗಿಕವಾಗಿದ್ದು, ಇದರಿಂದ ಬೆಳೆ ಬೆಳೆಯುವ ಭೂಮಿಯ ಮೇಲು ದುಷ್ಪರಿಣಾಮ ಬೀರಲಿದ್ದು, ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಬಾರದು ಎಂದು ಆಗ್ರಹಿಸಿದರು.
ಅಮೆರಿಕ ದೇಶದಲ್ಲಿಯೂ ಈ ರೀತಿಯ ಬೀಜಗಳಿಂದ ಬೆಳೆ ಬೆಳೆಯಲಾಗುತ್ತಿದ್ದು, ಇದನ್ನು ಪ್ರಾಣಿಗಳಿಗೆ ನೀಡಲು ಮತ್ತು ಉಪ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದ್ದು, ಸೇವನೆಗೆ ಯೋಗ್ಯವಲ್ಲದ ಸದರಿ ಬೀಜಗಳು ಆರೋಗ್ಯದ ಮೇಲೆ ದುಷ್ಪರಿಣಾ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಈ ಹಿಂದೆಯೂ ಬಿಟಿ ಹತ್ತಿ ತಳಿಯನ್ನು ಪರಿಚಯ ಮಾಡಿದ್ದು, ಸದರಿ ತಳಿಯಿಂದ ಸಾಕಷ್ಟು ಅನಾಹುತಗಳು, ರೈತರು ನಷ್ಟ ಅನುಭವಿಸುವಂತಹ ಸಂಗತಿಗಳು ನಡೆದು, ನಿರಂತರ ಹೋರಾಟದ ಫಲವಾಗಿ ಬಿಟಿ ಹತ್ತಿಯನ್ನು ಹಾಗೂ ಬಿಟಿ ಬದನೆಯನ್ನು ತಿರಸ್ಕರಿಸಿ ಹಿಮ್ಮೆಟ್ಟಿಸಲಾಯಿತು ಎಂದರು.
ಈಗ ಜಿಎಂ ಬೀಜಗಳನ್ನು ತಿರಸ್ಕರಿಸುವಂತೆ ಕಿಸಾನ್ ಸಂಘ ಪ್ರಸ್ತುತತೆಯಿರುವ ೬೦೦ ಜಿಲ್ಲೆಗಳ ಎಲ್ಲಾ ಸಂಸದರಿಗೆ ಮನವಿ ಸಲ್ಲಿಸಲಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರ ಅಧಿವೇಶನದಲ್ಲಿ ಇದನ್ನು ತಿರಸ್ಕರಿಸುವಂತೆ ಗಮನ ಸೆಳೆಯಲಾಗಿದೆ. ರಾಜ್ಯಸಭೆ, ಲೋಕಸಭೆಯ ಸಭಾಪತಿಗಳಿಯೂ ಪತ್ರ ಬರೆಯಲಾಗಿದ್ದು, ಫ್ಯಾಕ್ಸ್ ಮೂಲಕವೂ ಅವರ ಗಮನೆ ಸೆಳಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.
ಗೋಷ್ಠಿಯಲ್ಲಿ ಪಣಕನಹಳ್ಳಿ ವೆಂಕಟೇಶ್, ಬೂದನೂರು ಅಪ್ಪಾಜಿ, ಪಾಪೇಗೌಡ, ಇಂದ್ರಮ್ಮ, ದುರ್ಗೇಶ್ ಇದ್ದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…