ಮಂಡ್ಯ: ನಾನು ಸಿಎಂ ಆಗುವಾಗ ಚಲುವರಾಯಸ್ವಾಮಿ ನೋಡಿಕೊಂಡು ಶಾಸಕರು ಬಂದ್ರಾ? ಅಥವಾ ನನ್ನನ್ನು ನೋಡಿಕೊಂಡು ಬಂದರಾ? ಅನ್ನೋದಕ್ಕೆ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲು ಸಿದ್ಧನಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲು ನಾನು ಕಾರಣ ಅಲ್ಲ ಎಂದರೆ ಧರ್ಮಸ್ಥಳಕ್ಕೆ ಬಂದು ಆಣೆ-ಪ್ರಮಾಣ ಮಾಡಲಿ ಎಂದು ಸಚಿವ ಚಲುವರಾಯಸ್ವಾಮಿ ಸವಾಲು ಹಾಕಿದ್ದರು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ನಾನು ಆಣೆ ಮಾಡಲು ತಯಾರಿದ್ದೇನೆ. ನಾನು ಕೂಡ ಚಲುವರಾಯಸ್ವಾಮಿಯನ್ನು ಮಂತ್ರಿ ಮಾಡಲು ಶ್ರಮ ಹಾಕಿದ್ದೇನೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಚಲುವರಾಯಸ್ವಾಮಿಗೆ ಇರುವ ಚಟಗಳು ನನಗೆ ಇಲ್ಲ. ಮಂಡ್ಯದಲ್ಲಿ ಹೋಗಿ ಕೇಳಿ ಎಲ್ಲರೂ ಅವರ ಚಟಗಳ ಬಗ್ಗೆ ಕೂಲಂಕುಷವಾಗಿ ಹೇಳುತ್ತಾರೆ. ಚಲುವರಾಯಸ್ವಾಮಿ ಎಷ್ಟು ಮನೆ ಹಾಳು ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದರು.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…