ಮಂಡ್ಯ

ಕಾಂಗ್ರೆಸ್‌ ವಿಸರ್ಜನೆ ಮಾಡಿ ಎಂದು ಗಾಂಧೀಜಿ ಆವಾಗ್ಲೇ ಹೇಳಿದ್ದರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಕಟೌಟ್‌ಗಳಲ್ಲಿ ಗಾಂಧಿ ಫೋಟೋನೇ ನೋಡಲಿಲ್ಲ. ಆದರೆ ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

ಈ ಕುರಿತು ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಗಾಂಧಿ ಹೆಸರಿನಲ್ಲಿ ಕಾರ್ಯಕ್ರಮ ಮಾಡುತ್ತಿದೆ. ಆದ್ರೆ ಕಟೌಟ್‌ಗಳಲ್ಲಿ ಗಾಂಧೀಜಿ ಫೋಟೋನೇ ನೋಡಲಿಲ್ಲ. ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಟೀಕೆ ಮಾಡಿದರು.

ಗಾಂಧೀಜಿ ಹೆಸರಿನಲ್ಲಿ ಕಾರ್ಯಕ್ರಮ ಮಾಡಲು ನನ್ನ ತಕರಾರಿಲ್ಲ. ಸಂಘಟಿತ ಹೋರಾಟದ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಗಾಂಧೀಜಿ. ಆದ್ರೆ ಅವರ ರಾಮರಾಜ್ಯ ಪರಿಕಲ್ಪನೆ ಇತ್ತು ರಾಜ್ಯದಲ್ಲಿಲ್ಲಾ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕೆಂಡಾಮಂಡಲರಾದ ಎಚ್‌ಡಿಕೆ ಅವರು, ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಹಣ ಬಿಡುಗಡೆಯಾಗಿಲ್ಲ. ಸರಿಯಾದ ಚಿಕಿತ್ಸೆ ಇಲ್ಲದೇ ಬಾಣಂತಿಯರು, ಮಕ್ಕಳು ಸಾಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳಿಲ್ಲ. 2.75 ಲಕ್ಷ ಸರ್ಕಾರಿ ನೌಕರಿ ಖಾಲಿ ಇಟ್ಟುಕೊಂಡಿದ್ದಾರೆ. ಪ್ರತಿನಿತ್ಯ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಯಾವ ಸಚಿವರು ಬಾಯಿ ಬಿಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜನವರಿಯಿಂದ ಇಂದಿರಾ ಕಿಟ್‌ ವಿತರಣೆ

ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…

6 mins ago

ಲ್ಯಾಂಡ್‌ ಲಾರ್ಡ್‌ ಚಿತ್ರದ ಟೀಸರ್‌ ರಿಲೀಸ್‌

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ ಲಾರ್ಡ್‌ ಚಿತ್ರದಲ್ಲಿ ನಟ ರಾಜ್‌ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…

19 mins ago

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಬಗ್ಗೆ ಸಚಿವ ಮಧು ಬಂಗಾರಪ್ಪ ಹೇಳಿದ್ದಿಷ್ಟು.!

ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…

51 mins ago

ಮಂಡ್ಯಕ್ಕೆ ನನ್ನ ಕೊಡುಗೆ ಹೇಳುತ್ತೇನೆ, ನಿಮ್ಮ ಕೊಡುಗೆ ಪಟ್ಟಿ ಕೊಡಿ: ಸಿಎಂ ಸಿದ್ದುಗೆ ಎಚ್‌ಡಿಕೆ ಸವಾಲು

ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…

1 hour ago

ಕಾಳಸಂತೆಯಲ್ಲಿ ಅನ್ನಭಾಗ್ಯ ಅಕ್ಕಿ ಮಾರಾಟ: ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸಿ ಎಂದ ಸಿ.ಟಿ.ರವಿ

ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…

2 hours ago

ಸ್ವಾತಂತ್ರ್ಯ ಚಳುವಳಿಗೆ ವಂದೇ ಮಾತರಂ ಶಕ್ತಿ ತುಂಬಿತು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…

3 hours ago