ಮಂಡ್ಯ

ಕಾಂಗ್ರೆಸ್‌ ವಿಸರ್ಜನೆ ಮಾಡಿ ಎಂದು ಗಾಂಧೀಜಿ ಆವಾಗ್ಲೇ ಹೇಳಿದ್ದರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಕಟೌಟ್‌ಗಳಲ್ಲಿ ಗಾಂಧಿ ಫೋಟೋನೇ ನೋಡಲಿಲ್ಲ. ಆದರೆ ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ.

ಈ ಕುರಿತು ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಗಾಂಧಿ ಹೆಸರಿನಲ್ಲಿ ಕಾರ್ಯಕ್ರಮ ಮಾಡುತ್ತಿದೆ. ಆದ್ರೆ ಕಟೌಟ್‌ಗಳಲ್ಲಿ ಗಾಂಧೀಜಿ ಫೋಟೋನೇ ನೋಡಲಿಲ್ಲ. ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ಟೀಕೆ ಮಾಡಿದರು.

ಗಾಂಧೀಜಿ ಹೆಸರಿನಲ್ಲಿ ಕಾರ್ಯಕ್ರಮ ಮಾಡಲು ನನ್ನ ತಕರಾರಿಲ್ಲ. ಸಂಘಟಿತ ಹೋರಾಟದ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಗಾಂಧೀಜಿ. ಆದ್ರೆ ಅವರ ರಾಮರಾಜ್ಯ ಪರಿಕಲ್ಪನೆ ಇತ್ತು ರಾಜ್ಯದಲ್ಲಿಲ್ಲಾ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕೆಂಡಾಮಂಡಲರಾದ ಎಚ್‌ಡಿಕೆ ಅವರು, ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಹಣ ಬಿಡುಗಡೆಯಾಗಿಲ್ಲ. ಸರಿಯಾದ ಚಿಕಿತ್ಸೆ ಇಲ್ಲದೇ ಬಾಣಂತಿಯರು, ಮಕ್ಕಳು ಸಾಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳಿಲ್ಲ. 2.75 ಲಕ್ಷ ಸರ್ಕಾರಿ ನೌಕರಿ ಖಾಲಿ ಇಟ್ಟುಕೊಂಡಿದ್ದಾರೆ. ಪ್ರತಿನಿತ್ಯ ರಾಜ್ಯದಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಯಾವ ಸಚಿವರು ಬಾಯಿ ಬಿಡುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

18 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

49 mins ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

2 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

17 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

20 hours ago