ಮಂಡ್ಯ

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು ಕಾರ್ಯಕ್ರಮಗಳಡಿ ಉತ್ತಮ ಪ್ರಗತಿ ಸಾಧಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳನ್ನು ಜಿ.ಪಂ. ಸಿಇಒ ಕೆ.ಆರ್. ನಂದಿನಿ ಅಭಿನಂದಿಸಿದರು.

ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ನಡೆದ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನು ಅಭಿನಂದಿಸಿ ಪ್ರಶಂಸಾನ ಪತ್ರ ವಿತರಿಸಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಬೇಕೆಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದ ಅವರು, ಕಳಪೆ ಪ್ರಗತಿ ಸಾಧಿಸಿದ ಪ್ರತಿ ತಾಲ್ಲೂಕಿನ ೫ ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ ನಿಗದಿತ ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸಬೇಕೆಂದು ಹೇಳಿದರು.

ಡಿ.೩೧ರೊಳಗೆ ಗ್ರಾ.ಪಂ.ಗಳಲ್ಲಿ ಅಭಿಲೇಖಾಲಯ ಪ್ರಾರಂಭಿಸಿ
ಗ್ರಾ.ಪಂ.ನ ಕಡತಗಳು ಹಾಗೂ ಇ-ಸ್ವತ್ತು ಕಡತಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಜಿಲ್ಲೆಯ ಎಲ್ಲ ಗ್ರಾ.ಪಂ.ಗಳಿಗೂ ಈಗಾಗಲೇ ಸೂಚಿಸಲಾಗಿದ್ದು, ಆಯಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಧಿ ಅಧಿಕಾರಿಗಳು ಈ ಬಗ್ಗೆ ನಿರಂತರ ಅನುಸರಣೆ ಮಾಡಿ ಎಷ್ಟು ಗ್ರಾ.ಪಂ.ಗಳಲ್ಲಿ ಅಭಿಲೇಖಾಲಯ ಸುವ್ಯವಸ್ಥಿತವಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಂಡು, ಡಿ.೩೧ರೊಳಗೆ ಅಭಿಲೇಖಾಲಯ ಪ್ರಾರಂಭಿಸಿ, ಕ್ಯಾಟಲಾಗ್ ಇಂಡೆಕ್ಸ್ ಮಾಡಿ ೨೦೨೬ರ ಹೊಸ ವರ್ಷವನ್ನು ಹೊಸ ಸುಸಜ್ಜಿತ ಅಭಿಲೇಖಾಲಯದೊಂದಿಗೆ ಪ್ರಾರಂಭಿಸಬೇಕು ಎಂದು ಪಿಡಿಒಗಳಿಗೆ ಸೂಚಿಸಿದರು.

ಇದನ್ನೂ ಓದಿ:-ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಅಭಿಲೇಖಾಲಯ ನಿರ್ವಹಣೆಯನ್ನು ಸೂಕ್ತವಾಗಿ ಮಾಡಿದಲ್ಲಿ ಇ-ಸ್ವತ್ತು ಸಂಬಂಧಿಸಿದ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಸಂಗ್ರಹಿಸಿ ಸಾರ್ವಜನಿಕರಿಗೆ ಇ-ಸ್ವತ್ತು ನೀಡಲು ಹಾಗೂ ಸಾರ್ವಜನಿಕರು ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಹೊಸ ಇ-ಸ್ವತ್ತು ನಿಯಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ
ಇ-ಸ್ವತ್ತು ತಂತ್ರಾಂಶದಲ್ಲಿ ಮಾಡಲಾಗಿರುವ ಬದಲಾವಣೆಗಳ ಬಗ್ಗೆ ಹಾಗೂ ಹೊಸ ತಂತ್ರಾಂಶದ ಕಾರ್ಯವಿಧಾನದ ಬಗ್ಗೆ ಸಾರ್ವಜನಿಕರಲ್ಲಿ ಅಭಿಯಾನ ಮಾದರಿಯಲ್ಲಿ ಅರಿವು ಮೂಡಿಸಲು ಗ್ರಾ.ಪಂ.ಗಳು ಮುಂದಾಗಬೇಕು ಎಂದು ಪಿಡಿಒಗಳಿಗೆ ಸೂಚಿಸಿದರು.

೧೦೦ರಷ್ಟು ಪ್ರಗತಿ ಸಾಧಿಸಲು ಸೂಚನೆ:
ಪ್ರಸಕ್ತ ಸಾಲಿನ ಬೇಡಿಕೆಗೆ ಅನುಗುಣವಾಗಿ ಶೇ.೧೦೦ರಷ್ಟು ತೆರಿಗೆ ವಸೂಲಾತಿಯನ್ನು ಮಾಡುವಂತೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

16 mins ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

2 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

2 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

8 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

8 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

9 hours ago