ಮಂಡ್ಯ

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು ಕಾರ್ಯಕ್ರಮಗಳಡಿ ಉತ್ತಮ ಪ್ರಗತಿ ಸಾಧಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳನ್ನು ಜಿ.ಪಂ. ಸಿಇಒ ಕೆ.ಆರ್. ನಂದಿನಿ ಅಭಿನಂದಿಸಿದರು.

ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ನಡೆದ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳನ್ನು ಅಭಿನಂದಿಸಿ ಪ್ರಶಂಸಾನ ಪತ್ರ ವಿತರಿಸಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಬೇಕೆಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದ ಅವರು, ಕಳಪೆ ಪ್ರಗತಿ ಸಾಧಿಸಿದ ಪ್ರತಿ ತಾಲ್ಲೂಕಿನ ೫ ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿ ನಿಗದಿತ ಗುರಿಗೆ ಅನುಗುಣವಾಗಿ ಪ್ರಗತಿ ಸಾಧಿಸಬೇಕೆಂದು ಹೇಳಿದರು.

ಡಿ.೩೧ರೊಳಗೆ ಗ್ರಾ.ಪಂ.ಗಳಲ್ಲಿ ಅಭಿಲೇಖಾಲಯ ಪ್ರಾರಂಭಿಸಿ
ಗ್ರಾ.ಪಂ.ನ ಕಡತಗಳು ಹಾಗೂ ಇ-ಸ್ವತ್ತು ಕಡತಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಜಿಲ್ಲೆಯ ಎಲ್ಲ ಗ್ರಾ.ಪಂ.ಗಳಿಗೂ ಈಗಾಗಲೇ ಸೂಚಿಸಲಾಗಿದ್ದು, ಆಯಾ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಧಿ ಅಧಿಕಾರಿಗಳು ಈ ಬಗ್ಗೆ ನಿರಂತರ ಅನುಸರಣೆ ಮಾಡಿ ಎಷ್ಟು ಗ್ರಾ.ಪಂ.ಗಳಲ್ಲಿ ಅಭಿಲೇಖಾಲಯ ಸುವ್ಯವಸ್ಥಿತವಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಂಡು, ಡಿ.೩೧ರೊಳಗೆ ಅಭಿಲೇಖಾಲಯ ಪ್ರಾರಂಭಿಸಿ, ಕ್ಯಾಟಲಾಗ್ ಇಂಡೆಕ್ಸ್ ಮಾಡಿ ೨೦೨೬ರ ಹೊಸ ವರ್ಷವನ್ನು ಹೊಸ ಸುಸಜ್ಜಿತ ಅಭಿಲೇಖಾಲಯದೊಂದಿಗೆ ಪ್ರಾರಂಭಿಸಬೇಕು ಎಂದು ಪಿಡಿಒಗಳಿಗೆ ಸೂಚಿಸಿದರು.

ಇದನ್ನೂ ಓದಿ:-ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಅಭಿಲೇಖಾಲಯ ನಿರ್ವಹಣೆಯನ್ನು ಸೂಕ್ತವಾಗಿ ಮಾಡಿದಲ್ಲಿ ಇ-ಸ್ವತ್ತು ಸಂಬಂಧಿಸಿದ ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಸಂಗ್ರಹಿಸಿ ಸಾರ್ವಜನಿಕರಿಗೆ ಇ-ಸ್ವತ್ತು ನೀಡಲು ಹಾಗೂ ಸಾರ್ವಜನಿಕರು ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಹೊಸ ಇ-ಸ್ವತ್ತು ನಿಯಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ
ಇ-ಸ್ವತ್ತು ತಂತ್ರಾಂಶದಲ್ಲಿ ಮಾಡಲಾಗಿರುವ ಬದಲಾವಣೆಗಳ ಬಗ್ಗೆ ಹಾಗೂ ಹೊಸ ತಂತ್ರಾಂಶದ ಕಾರ್ಯವಿಧಾನದ ಬಗ್ಗೆ ಸಾರ್ವಜನಿಕರಲ್ಲಿ ಅಭಿಯಾನ ಮಾದರಿಯಲ್ಲಿ ಅರಿವು ಮೂಡಿಸಲು ಗ್ರಾ.ಪಂ.ಗಳು ಮುಂದಾಗಬೇಕು ಎಂದು ಪಿಡಿಒಗಳಿಗೆ ಸೂಚಿಸಿದರು.

೧೦೦ರಷ್ಟು ಪ್ರಗತಿ ಸಾಧಿಸಲು ಸೂಚನೆ:
ಪ್ರಸಕ್ತ ಸಾಲಿನ ಬೇಡಿಕೆಗೆ ಅನುಗುಣವಾಗಿ ಶೇ.೧೦೦ರಷ್ಟು ತೆರಿಗೆ ವಸೂಲಾತಿಯನ್ನು ಮಾಡುವಂತೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

4 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

12 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

12 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

12 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

15 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

15 hours ago