mysore sustenale
ಹೆಚ್.ಡಿ.ಕೋಟೆ : ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕುಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರಗತಿ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೆಚ್.ಡಿ.ಕೋಟೆ ತಾಲ್ಲೂಕಿನ ಆಲನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷ್ಣಯ್ಯನ ಮುದ್ದಯನ ಹುಂಡಿಯಲ್ಲಿಕಾಮಗಾರಿಗಳನ್ನು ಪರಿಶೀಲಿಸಿ, ಈಗಾಗಲೇ ಮೀಟರ್ ಅಳವಡಿಸಿ ನಲ್ಲಿ ಸಂಪರ್ಕ ಪೂರ್ಣಗೊಂಡು ನೀರನ್ನು ಪೂರೈಸುತ್ತಿರುವ ಕಡೆ ಜನರಿಗೆ ಮೀಟರ್ ರೀಡಿಂಗ್ ಪ್ರಾರಂಭಿಸಿ ಅರಿವು ಮೂಡಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.
ಅಣ್ಣೂರಿನ ಭುಕ್ತನ ಮಾಳ, ಬೀಚನಹಳ್ಳಿ ಅಂತರಸಂತೆ ಹೊನ್ನೂರು ಕುಪ್ಪೆ ಹಾಗೂ ಅಂತರಸಂತೆ ಬಹು ಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಗನ್ನು ಪರಿಶೀಲಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಿ, ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡುವಂತೆ ಗ್ರಾಮೀಣ ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯಫಾಲಕ ಅಭಿಯಂತರರಿಗೆ ಸೂಚಿಸಿದರು.
ಬಳಿಕ ಸರಗೂರು ತಾಲ್ಲೂಕಿನ ಬಿದರಹಳ್ಳಿಯ ನಂಜನಾಥಪುರ ಹಾಗೂ ಬಿ.ಮಟಕೆರೆಯ ಕೂಡಗಿ ಹಾಡಿಗೆ ಸಹ ಭೇಟಿ ನೀಡಿ ಕಾಮಗಾರಿಗಳ ಪರಿವೀಕ್ಷಿಸಿ ಮಾತನಾಡಿದ ಅವರು, ಜಲ ಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿನ ಪ್ರತಿ ಮನೆಗೂ ನಲ್ಲಿ ಮೂಲಕ ಶುದ್ಧ ಕುಡಿಯುವ ನೀರನ್ನು ಮನೆ ಮನೆ ಗಂಗೆ ಕಾರ್ಯಕ್ರಮದ ಮೂಲಕ ಪೂರೈಸಲಾಗುತ್ತಿದೆ ಎಂದರು.
ಈ ವೇಳೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಫಲಕ ಇಂಜಿನಿಯರ್ ಎ.ಎಸ್ ರಂಜಿತ್ ಕುಮಾರ್, ಹೆಚ್.ಡಿ.ಕೋಟೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಫಾಲಕ ಇಂಜಿನಿಯರ್ ಗೋವಿಂದ ನಾಯಕ, ಕಿರಿಯ ಕಾರ್ಯಫಾಲಕ ಇಂಜಿನಿಯರ್ ಗಳಾದ ಮೋನಶ್ರೀ, ಕೆ.ಸುನೀಲ್, ನಾಗೇಶ್, ಮೋಹನ್ ರಾಜ್, ಜಲ ಜೀವನ್ ಮಿಷನ್ ಜಿಲ್ಲಾ ಸಮಾಲೋಕರಾದ ಚೇತನ್ ಕುಮಾರ್ ಹಾಗೂ ಪಂಚಾಯಿತಿ ಅಭಿವೃದ್ಧಿಅಧಿಕಾರಿಗಳಾದ ಹೆಚ್.ಟಿ.ಪ್ರಭಾಕರ, ಅಶ್ವಿನಿ, ಸಂತೋಷ್ ನಾಗ್, ಕೆ.ಪಿ.ಸುರೇಶ್, ನರಸಿಂಹ ಮೂರ್ತಿ, ಭಾಗ್ಯ ಇತರರು ಇದ್ದರು.
ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…
ಭೇರ್ಯ ಮಹೇಶ್: ಕೆ.ಆರ್.ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…
ಮಂಡ್ಯ: ಮಾರ್ಚ್.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ವತಿಯಿಂದ 140 ಬಸ್ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…
ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್ ತಿರುಗೇಟು ನೀಡಿದೆ.…
ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…