ಮಂಡ್ಯ

ಜಲ ಜೀವನ್ ಮಿಷನ್ ಕಾಮಗಾರಿ ಪರಿಶೀಲಿಸಿದ ಸಿಇಒ ಯುಕೇಶ್ ಕುಮಾರ್

ಹೆಚ್.ಡಿ.ಕೋಟೆ : ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕುಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಪ್ರಗತಿ ಹಾಗೂ ಪೂರ್ಣಗೊಂಡಿರುವ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ಯುಕೇಶ್ ಕುಮಾರ್ ಅವರು ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೆಚ್.ಡಿ.ಕೋಟೆ ತಾಲ್ಲೂಕಿನ ಆಲನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷ್ಣಯ್ಯನ ಮುದ್ದಯನ ಹುಂಡಿಯಲ್ಲಿಕಾಮಗಾರಿಗಳನ್ನು ಪರಿಶೀಲಿಸಿ, ಈಗಾಗಲೇ ಮೀಟರ್ ಅಳವಡಿಸಿ ನಲ್ಲಿ ಸಂಪರ್ಕ ಪೂರ್ಣಗೊಂಡು ನೀರನ್ನು ಪೂರೈಸುತ್ತಿರುವ ಕಡೆ ಜನರಿಗೆ ಮೀಟರ್ ರೀಡಿಂಗ್ ಪ್ರಾರಂಭಿಸಿ ಅರಿವು ಮೂಡಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.

ಅಣ್ಣೂರಿನ ಭುಕ್ತನ ಮಾಳ, ಬೀಚನಹಳ್ಳಿ ಅಂತರಸಂತೆ ಹೊನ್ನೂರು ಕುಪ್ಪೆ ಹಾಗೂ ಅಂತರಸಂತೆ ಬಹು ಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಗನ್ನು ಪರಿಶೀಲಿಸಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಿ, ಗ್ರಾಮ ಪಂಚಾಯಿತಿಗೆ ಹಸ್ತಾಂತರ ಮಾಡುವಂತೆ ಗ್ರಾಮೀಣ ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯಫಾಲಕ ಅಭಿಯಂತರರಿಗೆ ಸೂಚಿಸಿದರು.

ಬಳಿಕ ಸರಗೂರು ತಾಲ್ಲೂಕಿನ ಬಿದರಹಳ್ಳಿಯ ನಂಜನಾಥಪುರ ಹಾಗೂ ಬಿ.ಮಟಕೆರೆಯ ಕೂಡಗಿ ಹಾಡಿಗೆ ಸಹ ಭೇಟಿ ನೀಡಿ ಕಾಮಗಾರಿಗಳ ಪರಿವೀಕ್ಷಿಸಿ ಮಾತನಾಡಿದ ಅವರು, ಜಲ ಜೀವನ್ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿನ ಪ್ರತಿ ಮನೆಗೂ ನಲ್ಲಿ ಮೂಲಕ ಶುದ್ಧ ಕುಡಿಯುವ ನೀರನ್ನು ಮನೆ ಮನೆ ಗಂಗೆ ಕಾರ್ಯಕ್ರಮದ ಮೂಲಕ ಪೂರೈಸಲಾಗುತ್ತಿದೆ ಎಂದರು.

ಈ ವೇಳೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಫಲಕ ಇಂಜಿನಿಯರ್ ಎ.ಎಸ್ ರಂಜಿತ್ ಕುಮಾರ್, ಹೆಚ್.ಡಿ.ಕೋಟೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯಫಾಲಕ ಇಂಜಿನಿಯರ್ ಗೋವಿಂದ ನಾಯಕ, ಕಿರಿಯ ಕಾರ್ಯಫಾಲಕ ಇಂಜಿನಿಯರ್ ಗಳಾದ ಮೋನಶ್ರೀ, ಕೆ.ಸುನೀಲ್, ನಾಗೇಶ್, ಮೋಹನ್ ರಾಜ್, ಜಲ ಜೀವನ್ ಮಿಷನ್ ಜಿಲ್ಲಾ ಸಮಾಲೋಕರಾದ ಚೇತನ್ ಕುಮಾರ್ ಹಾಗೂ ಪಂಚಾಯಿತಿ ಅಭಿವೃದ್ಧಿಅಧಿಕಾರಿಗಳಾದ ಹೆಚ್.ಟಿ.ಪ್ರಭಾಕರ, ಅಶ್ವಿನಿ, ಸಂತೋಷ್ ನಾಗ್, ಕೆ.ಪಿ.ಸುರೇಶ್, ನರಸಿಂಹ ಮೂರ್ತಿ, ಭಾಗ್ಯ ಇತರರು ಇದ್ದರು.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

11 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

13 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

13 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

13 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

13 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

13 hours ago