ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಚಡ್ಡಿ ಮೆರವಣಿಗೆ ನಡೆಸಿದರು.
ನಗರದ ಬಿಜೆಪಿ ಕಚೇರಿಯಿಂದ ಕಾರ್ಯಕರ್ತರು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ರಾಸುಗಳ ಜೊತೆ ಚಡ್ಡಿ ಮೆರವಣಿಗೆ ಹೊರಟು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಧರಣಿ ಸ್ಥಳಕ್ಕೆ ತೆರಳಿದ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು. ಯಾವುದೇ ಆದೇಶ ಇಲ್ಲದಿದ್ದರೂ ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ಕಾಂಗ್ರೆಸ್ ಸರ್ಕಾರ ದುಡುಕಿನ ನಿರ್ಧಾರ ಕೈಗೊಂಡಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಧೋರಣೆಯಿಂದ ಜಲಾಶಯಗಳಲ್ಲಿ ನೀರು ಬರೆದಾಗುತ್ತಿದೆ ಎಂದು ಆರೋಪಿಸಿದರು.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ, ಸುಪ್ರೀಂ ಕೋರ್ಟ್ ನಲ್ಲಿ ವಾಸ್ತವ ಸ್ಥಿತಿ ವಿಚಾರ ಮುಂದಿಟ್ಟು ವಾದ ಮಂಡನೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಖುದ್ದು ಹಾಜರಾಗದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ನೀಡಿರುವುದು ಸರ್ಕಾರದ ವೈಫಲ್ಯತೆಯನ್ನು ಎತ್ತಿ ತೋರಿಸಿದೆ ಎಂದು ದೂರಿದರು.
ನೀರು ಬಿಡುವುದಿಲ್ಲ ಎಂದು ಹೇಳಿದ ಸರ್ಕಾರ ಇದೀಗ ತಮಿಳುನಾಡಿಗೆ ನೀರು ಹರಿಸುತ್ತಿದೆ, ಕಾವೇರಿ ಕಣಿವೆ ರೈತರಿಗೆ ಒಂದು ಬೆಳೆಗೂ ನೀರಿಲ್ಲ. ಆದರೆ ತಮಿಳುನಾಡಿಗೆ ಮೂರನೇ ಬೆಳೆಗೆ ಸಾಕಾಗುವಷ್ಟು ನೀರು ಬಿಡುತ್ತಿದೆ, ರೈತರಿಗೆ ನಿರಂತರ ಅನ್ಯಾಯ ಮಾಡುತ್ತಿದೆ ಎಂದು ಹೇಳಿದರು.
ಇದೇ ರೀತಿ ನೀರು ಹರಿಸುತ್ತಿದ್ದರೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಲಿದೆ, ಪರಿಸ್ಥಿತಿಯನ್ನು ಅರಿತು ತಕ್ಷಣ ನೀರು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಸ್ ಉಮೇಶ್. ಸಿದ್ದರಾಮಯ್ಯ, ಸಚ್ಚಿದಾನಂದ, ಡಾ. ಇಂದ್ರೇಶ್, ಕೆ.ಕೃಷ್ಣಪ್ಪ, ಸಾದೊಳಲು ಸ್ವಾಮಿ ನೇತೃತ್ವ ವಹಿಸಿದ್ದರು.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್ನಲ್ಲಿ ಶೆಡ್ವೊಂದರ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…