ಮಂಡ್ಯ

ಕಾವೇರಿಗಾಗಿ ಬಿಜೆಪಿ ಕಾರ್ಯಕರ್ತರ ಚಡ್ಡಿ ಮೆರವಣಿಗೆ

ಮಂಡ್ಯ : ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಚಡ್ಡಿ ಮೆರವಣಿಗೆ ನಡೆಸಿದರು.

ನಗರದ ಬಿಜೆಪಿ ಕಚೇರಿಯಿಂದ ಕಾರ್ಯಕರ್ತರು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ರಾಸುಗಳ ಜೊತೆ ಚಡ್ಡಿ ಮೆರವಣಿಗೆ ಹೊರಟು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಧರಣಿ ಸ್ಥಳಕ್ಕೆ ತೆರಳಿದ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು. ಯಾವುದೇ ಆದೇಶ ಇಲ್ಲದಿದ್ದರೂ ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ಕಾಂಗ್ರೆಸ್ ಸರ್ಕಾರ ದುಡುಕಿನ ನಿರ್ಧಾರ ಕೈಗೊಂಡಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಧೋರಣೆಯಿಂದ ಜಲಾಶಯಗಳಲ್ಲಿ ನೀರು ಬರೆದಾಗುತ್ತಿದೆ ಎಂದು ಆರೋಪಿಸಿದರು.

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ, ಸುಪ್ರೀಂ ಕೋರ್ಟ್ ನಲ್ಲಿ ವಾಸ್ತವ ಸ್ಥಿತಿ ವಿಚಾರ ಮುಂದಿಟ್ಟು ವಾದ ಮಂಡನೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಖುದ್ದು ಹಾಜರಾಗದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ನೀಡಿರುವುದು ಸರ್ಕಾರದ ವೈಫಲ್ಯತೆಯನ್ನು ಎತ್ತಿ ತೋರಿಸಿದೆ ಎಂದು ದೂರಿದರು.

ನೀರು ಬಿಡುವುದಿಲ್ಲ ಎಂದು ಹೇಳಿದ ಸರ್ಕಾರ ಇದೀಗ ತಮಿಳುನಾಡಿಗೆ ನೀರು ಹರಿಸುತ್ತಿದೆ, ಕಾವೇರಿ ಕಣಿವೆ ರೈತರಿಗೆ ಒಂದು ಬೆಳೆಗೂ ನೀರಿಲ್ಲ. ಆದರೆ ತಮಿಳುನಾಡಿಗೆ ಮೂರನೇ ಬೆಳೆಗೆ ಸಾಕಾಗುವಷ್ಟು ನೀರು ಬಿಡುತ್ತಿದೆ, ರೈತರಿಗೆ ನಿರಂತರ ಅನ್ಯಾಯ ಮಾಡುತ್ತಿದೆ ಎಂದು ಹೇಳಿದರು.

ಇದೇ ರೀತಿ ನೀರು ಹರಿಸುತ್ತಿದ್ದರೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಲಿದೆ, ಪರಿಸ್ಥಿತಿಯನ್ನು ಅರಿತು ತಕ್ಷಣ ನೀರು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎಸ್ ಉಮೇಶ್. ಸಿದ್ದರಾಮಯ್ಯ, ಸಚ್ಚಿದಾನಂದ, ಡಾ. ಇಂದ್ರೇಶ್, ಕೆ.ಕೃಷ್ಣಪ್ಪ, ಸಾದೊಳಲು ಸ್ವಾಮಿ ನೇತೃತ್ವ ವಹಿಸಿದ್ದರು.

lokesh

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

2 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

3 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

4 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

5 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

5 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

9 hours ago