ಮಂಡ್ಯ

ಜಾತಿಗಣತಿ ; ಒಕ್ಕಲಿಗರು ಮೀಸಲಾತಿ ಪಡೆಯಲು ಮುಂದಾಗಬೇಕು: ಚೈತನ್ಯ ಸ್ವಾಮೀಜಿ ಕರೆ

ಮಂಡ್ಯ : ಕೇಂದ್ರ ಸರ್ಕಾರವು ಜಾತಿಗಣತಿ ನಡೆಸುವ ಘೋಷಣೆ ಮಾಡಿದ್ದು, ಗಣತಿಯಲ್ಲಿ ಒಕ್ಕಲಿಗರು ತಮ್ಮ ಉಪಜಾತಿಗಳನ್ನು ಕಡ್ಡಾಯವಾಗಿ ನಮೂದಿಸಿ, ಇಡಬ್ಲ್ಯೂಎಸ್ (ಆರ್ಥಿಕವಾಗಿ ಹಿಂದುಳಿದವರು) ಮೀಸಲಾತಿ ಪಡೆಯಲು ಮುಂದಾಗಬೇಕು ಎಂದು ಒಕ್ಕಲಿಗ ಧರ್ಮ ಮಹಾಸಭಾದ ಸಂಸ್ಥಾಪಕರಾದ ಸಿದ್ದರಾಮ ಚೈತನ್ಯ ಸ್ವಾಮೀಜಿ ಕರೆ ನೀಡಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿಗಣತಿಯಲ್ಲಿ ಒಕ್ಕಲಿಗರು ಸರಿಯಾಗಿ ತಮ್ಮ ಉಪಜಾತಿಗಳನ್ನು ಕಡ್ಡಾಯವಾಗಿ ಬರೆಸುವ ಮೂಲಕ ಸರ್ಕಾರದ ಮೀಸಲಾತಿ, ವಿವಿಧ ಸವಲತ್ತುಗಳನ್ನು ಪಡೆದು ಉಪಜಾತಿಗಳ ಸಂಸ್ಕೃತಿ, ಸಂಪ್ರದಾಯಗಳನ್ನು ಉಳಿಸಿಕೊಳ್ಳಬೇಕು ಎಂದು ಕೋರಿದರು.

ರಾಜ್ಯ ಸರ್ಕಾರ ನಡೆಸಿದ ಕಾಂತರಾಜು ಆಯೋಗದ ವರದಿಯು ಸಂವಿಧಾನ ವಿರೋಧಿ ಮತ್ತು ಅವೈಜ್ಞಾನಿಕವಾಗಿದ್ದು, ಒಕ್ಕಲಿಗ ಸಮುದಾಯಕ್ಕೆ ಮಾರವಾಗಿದೆ. ಮಂಡ್ಯ ಜಿಲ್ಲೆಯ ತಾಲೂಕೊಂದರಲ್ಲೇ ೧ ಲಕ್ಷಕ್ಕೂ ಹೆಚ್ಚು ಗಂಗಟರ್ ಒಕ್ಕಲಿಗರಿದ್ದು, ರಾಜ್ಯವಿಡಿ ೮೪,೦೦೦ ಮಾತ್ರ ಇರುವುದಾಗಿ ತೋರಿ, ಇತರ ಉಪಜಾತಿಗಳಲ್ಲಿ ತಪ್ಪಾದ ಅಂಕಿ ಅಂಶ ನೀಡಿ, ಒಕ್ಕಲಿಗರನ್ನು ಅವಸಾನದಂಚಿಗೆ ತಳ್ಳುವ ವರದಿ ಮಂಡಿಸಲಾಗಿದೆ. ಸರ್ಕಾರ ಈ ವರಿದಿಯನ್ನು ತಿರಸ್ಕರಿಸಬೇಕು ಎಂದು ಆಗ್ರಹಿಸಿದರು.

ಸಮುದಾಯದ ಗಂಗಟಕಾರ್, ಮರಸು, ದಾಸ, ಹಳ್ಳಿಕಾರ, ಸರ್ಪ ಒಕ್ಕಲಿಗ ಉಪಜಾತಿಗಳಿಗೆ ಶೇ ೧೦ರಷ್ಟು ಇಡಬ್ಲ್ಯೂಎಸ್ (ಆರ್ಥಿಕವಾಗಿ ಹಿಂದುಳಿದವರು) ಮೀಸಲಾತಿಯ ಅವಕಾಶವಿದ್ದು, ಉಪಜಾತಿ ಸಹಿತ ಜಾತಿ ಪ್ರಮಾಣಪತ್ರವಿಲ್ಲದ ಕಾರಣ ಈ ಮೀಸಲಾತಿ ಸದ್ಬಳಕೆಯಾಗಲಿಲ್ಲ. ನಗರ ಪ್ರದೇಶದ ಒಕ್ಕಲಿಗರನ್ನು ಒಬಿಸಿ ಪಟ್ಟಿಯಿಂದ ತೆಗೆಯಲಾಗಿದ್ದು, ಈಗಲಾದರೂ ಎಚ್ಚೆತ್ತು ಉಪಜಾತಿಗಳನ್ನು ನಮೂದಿಸಿ, ಮೀಸಲಾತಿ ಸವಲತ್ತು ಪಡೆಯಬೇಕು ಎಂದರು.

ಉಪಜಾತಿಗಳ ನಮೂದನೆಯಿಂದ ಪ್ರವರ್ಗದ ಬದಲಾವಣೆಯಾಗಬಹುದೇ ಹೊರತು ಜಾತಿ ಬದಲಾಗದು, ಇಡಬ್ಲ್ಯೂಎಸ್ (ಆರ್ಥಿಕವಾಗಿ ಹಿಂದುಳಿದವರು) ಮೀಸಲಾತಿಯಲ್ಲಿ ಸವಲತ್ತುಗಳನ್ನು ಪಡೆಯಲು ಉಪಜಾತಿಗಳನ್ನು ನಮೂದಿಸಿ ಸಹಕರಿಸಿ ಎಂದು ಮನವಿ ಮಾಡಿದರು.

ಮಹಾಸಭಾದ ರಾಜ್ಯಸಂಚಾಲಕ ಸಿ.ಎಂ.ಕ್ರಾಂತಿಸಿಂಹ ಮಾತನಾಡಿ, ಅರ್ಹ ಮೀಸಲಾತಿ ಪಡೆಯುವ ಸಂಬಂಧ ರಾಜ್ಯಾದ್ಯಂತ ವಿವಿಧ ಒಕ್ಕಲಿಗ ಉಪಜಾತಿಗಳನ್ನು ಸೇರಿಸಿ ಜಾಗೃತಿ ಆಂದೋಲನ ನಡೆಸಲಾಗುವುದು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ರಾಜ್ಯ ಸಂಚಾಲಕ ಆನಂದ್‌ಕುಮಾರ್, ಜಿಲ್ಲಾ ಸಂಚಾಲಕ ಕೆ.ಪಿ.ರಕ್ಷಿತ್‌ಗೌಡ, ನಾಡಪ್ರಭು ಕೆಂಪೇಗೌಡರ ಯುವ ಶಕ್ತಿ ವೇದಿಕೆಯ ರಾಜ್ಯಾಧ್ಯಕ್ಷ ನರಸಿಂಹೇಗೌಡ, ಕಿರಣ್‌ಕುಮಾರ್‌ಗೌಡ ಇದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಫಲಪ್ರದವಾಗಲಿ ಮಾತುಕತೆ!

ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…

51 mins ago

ಓದುಗರ ಪತ್ರ: ಆಟೋ ಗ್ಯಾಸ್ ಅಭಾವ ಕೃತಕವೋ? ನೈಜವೋ?

ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು  ಕೆಜಿಗೆ ರೂ. ೮೯ ಇದ್ದ  ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…

53 mins ago

ಓದುಗರ ಪತ್ರ: ಯುದ್ಧ ಪೂರ್ಣ ನಿಲ್ಲಲಿ, ಶಾಂತಿ ನೆಲೆಸಲಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ   ಅಲ್ಪ ವಿರಾಮವನ್ನು ಘೋಷಿಸಲಾಗಿದೆ.  ಈ  ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…

55 mins ago

ಓದುಗರ ಪತ್ರ: ಆರೋಗ್ಯ ಕೇಂದ್ರಕ್ಕೆ ಆಂಬ್ಯುಲೆನ್ಸ್  ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…

57 mins ago

‘ದುರಂಧರ್’- ನಾಯಕ ಗುಪ್ತಚರನಲ್ಲ, ಯೋಧನೂ ಅಲ್ಲ!’

ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…

60 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ:  ಚಲನಚಿತ್ರ ಪ್ರಮಾಣೀಕರಣ ಮಂಡಳಿ, ಪ್ರಮಾಣಪತ್ರ, ಉಲ್ಲಂಘನೆ

ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…

1 hour ago