ಮಂಡ್ಯ

ಜಾತಿಗಣತಿ ; ಒಕ್ಕಲಿಗರು ಮೀಸಲಾತಿ ಪಡೆಯಲು ಮುಂದಾಗಬೇಕು: ಚೈತನ್ಯ ಸ್ವಾಮೀಜಿ ಕರೆ

ಮಂಡ್ಯ : ಕೇಂದ್ರ ಸರ್ಕಾರವು ಜಾತಿಗಣತಿ ನಡೆಸುವ ಘೋಷಣೆ ಮಾಡಿದ್ದು, ಗಣತಿಯಲ್ಲಿ ಒಕ್ಕಲಿಗರು ತಮ್ಮ ಉಪಜಾತಿಗಳನ್ನು ಕಡ್ಡಾಯವಾಗಿ ನಮೂದಿಸಿ, ಇಡಬ್ಲ್ಯೂಎಸ್ (ಆರ್ಥಿಕವಾಗಿ ಹಿಂದುಳಿದವರು) ಮೀಸಲಾತಿ ಪಡೆಯಲು ಮುಂದಾಗಬೇಕು ಎಂದು ಒಕ್ಕಲಿಗ ಧರ್ಮ ಮಹಾಸಭಾದ ಸಂಸ್ಥಾಪಕರಾದ ಸಿದ್ದರಾಮ ಚೈತನ್ಯ ಸ್ವಾಮೀಜಿ ಕರೆ ನೀಡಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿಗಣತಿಯಲ್ಲಿ ಒಕ್ಕಲಿಗರು ಸರಿಯಾಗಿ ತಮ್ಮ ಉಪಜಾತಿಗಳನ್ನು ಕಡ್ಡಾಯವಾಗಿ ಬರೆಸುವ ಮೂಲಕ ಸರ್ಕಾರದ ಮೀಸಲಾತಿ, ವಿವಿಧ ಸವಲತ್ತುಗಳನ್ನು ಪಡೆದು ಉಪಜಾತಿಗಳ ಸಂಸ್ಕೃತಿ, ಸಂಪ್ರದಾಯಗಳನ್ನು ಉಳಿಸಿಕೊಳ್ಳಬೇಕು ಎಂದು ಕೋರಿದರು.

ರಾಜ್ಯ ಸರ್ಕಾರ ನಡೆಸಿದ ಕಾಂತರಾಜು ಆಯೋಗದ ವರದಿಯು ಸಂವಿಧಾನ ವಿರೋಧಿ ಮತ್ತು ಅವೈಜ್ಞಾನಿಕವಾಗಿದ್ದು, ಒಕ್ಕಲಿಗ ಸಮುದಾಯಕ್ಕೆ ಮಾರವಾಗಿದೆ. ಮಂಡ್ಯ ಜಿಲ್ಲೆಯ ತಾಲೂಕೊಂದರಲ್ಲೇ ೧ ಲಕ್ಷಕ್ಕೂ ಹೆಚ್ಚು ಗಂಗಟರ್ ಒಕ್ಕಲಿಗರಿದ್ದು, ರಾಜ್ಯವಿಡಿ ೮೪,೦೦೦ ಮಾತ್ರ ಇರುವುದಾಗಿ ತೋರಿ, ಇತರ ಉಪಜಾತಿಗಳಲ್ಲಿ ತಪ್ಪಾದ ಅಂಕಿ ಅಂಶ ನೀಡಿ, ಒಕ್ಕಲಿಗರನ್ನು ಅವಸಾನದಂಚಿಗೆ ತಳ್ಳುವ ವರದಿ ಮಂಡಿಸಲಾಗಿದೆ. ಸರ್ಕಾರ ಈ ವರಿದಿಯನ್ನು ತಿರಸ್ಕರಿಸಬೇಕು ಎಂದು ಆಗ್ರಹಿಸಿದರು.

ಸಮುದಾಯದ ಗಂಗಟಕಾರ್, ಮರಸು, ದಾಸ, ಹಳ್ಳಿಕಾರ, ಸರ್ಪ ಒಕ್ಕಲಿಗ ಉಪಜಾತಿಗಳಿಗೆ ಶೇ ೧೦ರಷ್ಟು ಇಡಬ್ಲ್ಯೂಎಸ್ (ಆರ್ಥಿಕವಾಗಿ ಹಿಂದುಳಿದವರು) ಮೀಸಲಾತಿಯ ಅವಕಾಶವಿದ್ದು, ಉಪಜಾತಿ ಸಹಿತ ಜಾತಿ ಪ್ರಮಾಣಪತ್ರವಿಲ್ಲದ ಕಾರಣ ಈ ಮೀಸಲಾತಿ ಸದ್ಬಳಕೆಯಾಗಲಿಲ್ಲ. ನಗರ ಪ್ರದೇಶದ ಒಕ್ಕಲಿಗರನ್ನು ಒಬಿಸಿ ಪಟ್ಟಿಯಿಂದ ತೆಗೆಯಲಾಗಿದ್ದು, ಈಗಲಾದರೂ ಎಚ್ಚೆತ್ತು ಉಪಜಾತಿಗಳನ್ನು ನಮೂದಿಸಿ, ಮೀಸಲಾತಿ ಸವಲತ್ತು ಪಡೆಯಬೇಕು ಎಂದರು.

ಉಪಜಾತಿಗಳ ನಮೂದನೆಯಿಂದ ಪ್ರವರ್ಗದ ಬದಲಾವಣೆಯಾಗಬಹುದೇ ಹೊರತು ಜಾತಿ ಬದಲಾಗದು, ಇಡಬ್ಲ್ಯೂಎಸ್ (ಆರ್ಥಿಕವಾಗಿ ಹಿಂದುಳಿದವರು) ಮೀಸಲಾತಿಯಲ್ಲಿ ಸವಲತ್ತುಗಳನ್ನು ಪಡೆಯಲು ಉಪಜಾತಿಗಳನ್ನು ನಮೂದಿಸಿ ಸಹಕರಿಸಿ ಎಂದು ಮನವಿ ಮಾಡಿದರು.

ಮಹಾಸಭಾದ ರಾಜ್ಯಸಂಚಾಲಕ ಸಿ.ಎಂ.ಕ್ರಾಂತಿಸಿಂಹ ಮಾತನಾಡಿ, ಅರ್ಹ ಮೀಸಲಾತಿ ಪಡೆಯುವ ಸಂಬಂಧ ರಾಜ್ಯಾದ್ಯಂತ ವಿವಿಧ ಒಕ್ಕಲಿಗ ಉಪಜಾತಿಗಳನ್ನು ಸೇರಿಸಿ ಜಾಗೃತಿ ಆಂದೋಲನ ನಡೆಸಲಾಗುವುದು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ರಾಜ್ಯ ಸಂಚಾಲಕ ಆನಂದ್‌ಕುಮಾರ್, ಜಿಲ್ಲಾ ಸಂಚಾಲಕ ಕೆ.ಪಿ.ರಕ್ಷಿತ್‌ಗೌಡ, ನಾಡಪ್ರಭು ಕೆಂಪೇಗೌಡರ ಯುವ ಶಕ್ತಿ ವೇದಿಕೆಯ ರಾಜ್ಯಾಧ್ಯಕ್ಷ ನರಸಿಂಹೇಗೌಡ, ಕಿರಣ್‌ಕುಮಾರ್‌ಗೌಡ ಇದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

4 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

4 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

5 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

5 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

5 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

5 hours ago