ಮಂಡ್ಯ

57 ವರ್ಷಗಳ ನಂತರ ಖಾಸಗಿ ಕೃಷಿ ಕಾಲೇಜು ಸ್ಥಾಪನೆ: ಚಲುವರಾಯಸ್ವಾಮಿ

ಮಂಡ್ಯ: ಕಾನೂನಾನತ್ಮಕವಾಗಿ ಖಾಸಗಿ ಕೃಷಿ ಮಹಾವಿದ್ಯಾಲಯಗಳನ್ನು ಅಫಿಲಿಯೇಟೆಡ್  ಕಾಲೇಜುಗಳೆಂದು ಅನುಮತಿ ನೀಡಲು ರಾಜ್ಯ ಸರ್ಕಾರಕ್ಕೆ ಅವಕಾಶ ಒದಗಿಸಲಾಗಿದ್ದು, 57 ವರ್ಷಗಳ ನಂತರ ರಾಜ್ಯದಲ್ಲಿ ಮೊಟ್ಟ ಮೊದಲ ಖಾಸಗಿ ಕೃಷಿ ಕಾಲೇಜು ಆರಂಭಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರದಲ್ಲಿರುವ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ವತಿಯಿಂದ ಇಂದು(ಡಿ.2) ಆಯೋಜಿಸಲಾಗಿದ್ದ ನೂತನ ಕೃಷಿ ಮಹಾವಿದ್ಯಾಲಯ ಕಾಲೇಜನ್ನು ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಗುಣಮಟ್ಟದ ಕೃಷಿ ಶಿಕ್ಷಣ ನೀಡಲು ಆದಿ ಚುಂಚನಗಿರಿ ಶಿಕ್ಷಣ ಸಂಸ್ಥೆ ಮುಂದೆ ಬಂದಿರುವುದು ಮೌಲ್ಯಯುತ ಶಿಕ್ಷಣ ನೀಡುವುದಕ್ಕೆ ಸಹಕಾರಿಯಾಗಲಿದೆ ಎಂದಿದ್ದಾರೆ.

ನಮ್ಮ ರಾಜ್ಯದಲ್ಲಿ 2013ರಿಂದ ಎಲ್ಲಾ 6 ಕೃಷಿ, ತೋಟಗಾರಿಕೆ ಮತ್ತು ಪಶುಸಂಶೋಧನಾ ವಿಶ್ವವಿದ್ಯಾಲಯಗಳಿಗೆ, ಮೆಡಿಕಲ್ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಂತೆ ಸಿಇಟಿ ಮುಖಾಂತರ ಮೆರಿಟ್ ಆಧಾರದ ಮೇರೆಗೆ ಸೀಟುಗಳನ್ನು ಒದಗಿಸಲು ಆರಂಭಿಸಲಾಯಿತು. ಅಂದಿನಿಂದ ಇಂದಿನವರೆಗೂ ಕೃಷಿ ಸ್ನಾತಕ ಪದವಿಯನ್ನು ಕಲಿಯಲು ಇಚ್ಚಿಸುವ ವಿದ್ಯಾರ್ಥಿಗಳ ಸಂಖ್ಯೆಯು ವರ್ಷದಿಂದ ವರ್ಷಕ್ಕೆ 23 ಸಾವಿರದಿಂದ ಪ್ರಸ್ತುತ ವರ್ಷಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಇಟಿಯಲ್ಲಿ ಕೃಷಿ ಶಿಕ್ಷಣಕ್ಕೆ ಅರ್ಜಿ ಸಲ್ಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದ 6 ಕೃಷಿ ಸಂಬಂಧಿತ ವಿಶ್ವವಿದ್ಯಾಲಯಗಳಲ್ಲಿ ಕೃಷಿ ಪದವಿಗೆ ಕೇವಲ 5000 ಸೀಟುಗಳನ್ನು ತುಂಬಲು ಅವಕಾಶವಿದೆ. ಆದರೆ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಉನ್ನತ ಕೃಷಿ ಶಿಕ್ಷಣವನ್ನು ವ್ಯಾಸಂಗ ಮಾಡಲು ಅಪೇಕ್ಷಿಸುತ್ತಿರುವುದರಿಂದ ಸಾಮಾಜಿಕ ನ್ಯಾಯವನ್ನು ಒದಗಿಸುವುದು ಸರ್ಕಾರದ ಕರ್ತವ್ಯವಾಗಿರುವ ಹಿನ್ನಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕೃಷಿ ವಿಜ್ಞಾನ ಕಾಲೇಜು ಆರಂಭಿಸಲು ಅನುಮತಿ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

2 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

5 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

6 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

7 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

7 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

7 hours ago