ಮಂಡ್ಯ

ಆದಿ ಚುಂಚನಗಿರಿ ಮಠ ವಿಭಜಿಸಿದ್ದು, ಶ್ರೀಗಳ ಫೋನ್‌ ಟ್ಯಾಪ್‌ ಮಾಡಿಸಿದ್ದು ಜೆಡಿಎಸ್:‌ ಚಲುವರಾಯಸ್ವಾಮಿ ಕಿಡಿ

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎನ್‌ ಚಲುವರಾಯಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಆದಿಚುಂಚನಗಿರಿಯ ನಿರ್ಮಲಾನಂದನಾಥ ಶ್ರೀಗಳ ಫೋನ್‌ ಟ್ಯಾಪ್‌ ಮಾಡಿಸಿದ್ದರು ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ.

ಹಿಂದೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಆದಿಚುಂಚನಗಿರಿಯ ನಿರ್ಮಲಾನಂದನಾಥ ಶ್ರೀಗಳ ಫೋನ್‌ ಅನ್ನು ಟ್ಯಾಪ್‌ ಮಾಡಿಸಿದ್ದರು. ಈಗ ಹೇಗೆ ಹೋಗಿ ಆಶೀರ್ವಾದ ಕೇಳ್ತಾ ಇದ್ದಾರೆ. ನಾವೂ ಸಹ ಜೆಎಸ್‌ಎಸ್‌, ಸಿದ್ದಗಂಗಾ, ಚುಂಚನಗಿರಿ ಮಠಗಳಿಗೆ ಹೋಗಿದ್ದೇವೆ, ಅವರೂ ಹೋಗಿದ್ದಾರೆ, ಚುನಾವಣೆ ವೇಳೆ ಇದು ಸಹಜ ಎಂದರು.

ಕುಮಾರಸ್ವಾಮಿ ಸ್ವಾಮೀಜಿ ಫೋನ್‌ ಟ್ಯಾಪ್‌ ಮಾಡಿದ್ದಾರೆ. ಸ್ವಾಮೀಜಿಗಳು ಯಾರಿಗೂ ಪ್ರಚಾರ ಮಾಡೋಕೆ ಆಗಲ್ಲ. ಚುಂಚನಗಿರಿ ಮಠ ಒಕ್ಕಲಿಗ ಸಮುದಾಯದ ಮಠ ಆದರೂ ಸಹ ಅದು ರಾಜ್ಯದ ಅತ್ಯಂತ ಜಾತ್ಯಾತೀತ ಮಠ. ಎಲ್ಲಾ ಜಾತಿಗಳನ್ನು ಪ್ರೀತಿಸಿ ಬೆಳೆಸಿದ ಬಾಲಗಂಗಾಧರನಾಥ ಶ್ರೀಗಳಿಗೆ ಜೆಡಿಎಸ್‌ ಇಷ್ಟು ಕಿರುಕುಳ ಕೊಟ್ಟಿದೆ ಎಂದು ಗೊತ್ತಿದೆ. ಈಗ ಚುನಾವಣೆ ಬಂದಿದೆ, ಅದಕ್ಕೆ ಕುಮಾರಸ್ವಾಮಿ ಮಠಕ್ಕೆ ಹೋಗ್ತಾ ಇದ್ದಾರೆ ಅಷ್ಟೇ ಎಂದು ಚಲುವರಾಯಸ್ವಾಮಿ ಹೇಳಿದರು.

andolana

Recent Posts

ಗ್ಯಾರಂಟಿ ಕುರಿತು ಸರ್ವೇ ನಡೆಸಲಿ : ಎಚ್.ವಿಶ್ವನಾಥ್‌ ಒತ್ತಾಯ

ಮೈಸೂರು : ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಸರ್ವೇ ನಡೆಸಬೇಕು. ಕಳೆದ…

22 mins ago

ಹನೂರು | ವಿವಿಧ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಹನೂರು : ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ…

42 mins ago

ಜಮೀನುಗಳಲ್ಲಿ ಕಾಡಾನೆ ಓಡಾಟ : ಗ್ರಾಮಸ್ಥರಲ್ಲಿ ಆತಂಕ

ಹನೂರು : ಬೆಳ್ಳಂಬೆಳಗ್ಗೆ ಎರಡು ಕಾಡಾನೆಗಳು ಜಮೀನುಗಳಲ್ಲಿ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ಶನಿವಾರ…

1 hour ago

ವಿದ್ಯಾರ್ಥಿಗಳು ಕಲೆ ಮತ್ತು ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಿ : ರಂಗೇಗೌಡ ಸಲಹೆ

ಮೈಸೂರು : ಕಲೆ ಎಲ್ಲರಿಗೂ ಒಲಿದು ಬರೋದಿಲ್ಲ ಕೆಲವರಿಗೆ ಮಾತ್ರ ಒಲಿದು ಬರುತ್ತದೆ. ಕಲೆ ಮತ್ತು ಸಂಸ್ಕೃತಿ ಮೈಗೂಡಿಸಿಕೊಂಡರೆ ತಮ್ಮ…

1 hour ago

ಲಂಚ | ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ

ಗದಗ : ಗುತ್ತಿಗೆದಾರನಿಂದ ಕಮಿಷನ್‌ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…

2 hours ago

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

4 hours ago