ಮಂಡ್ಯ

ಮಗನಿಗೆ ಮದುವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಹೆಚ್‌ಡಿಕೆ ಕುರಿತು ಚಲುವರಾಯಸ್ವಾಮಿ ವ್ಯಂಗ್ಯ

ಮಂಡ್ಯ: ಮಾಜಿ ಸಚಿವ ಸಿ ಎಸ್‌ ಪುಟ್ಟರಾಜು ಅವರನ್ನು ಅಭ್ಯರ್ಥಿ ಎಂದು ತಾವೇ ಹೇಳಿ ಇದೀಗ ಅವರೇ ಅಭ್ಯರ್ಥಿಯಾಗುತ್ತಿದ್ದಾರೆ. ಮಗನಿಗೆ ಮದುವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ ಜೆಡಿಎಸ್‌ ಪರಿಸ್ಥಿತಿ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌ ಚಲುವರಾಯಸ್ವಾಮಿ ಅವರು ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ವ್ಯಂಗವಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮಂಡ್ಯ ಜಿಲ್ಲೆಗೆ ಕೆಟ್ಟ ದೃಷ್ಟಿ ಬೀಳುವುದು ಬೇಡ, ನಾವು, ನಮ್ಮ ಜನ ಏನೋ ಮಾಡಿಕೊಳ್ಳುತ್ತೇವೆ. ನೀವು ಪ್ರಧಾನಿಯಾಗಿ, ಇನ್ನೊಮ್ಮೆ ಸಿಎಂ ಆಗಿ, ನಿಮ್ಮ ಬಗ್ಗೆ ಕೆಟ್ಟದಾಗಿ ಮಾತನಾಡುವುದಿಲ್ಲ. ಆದರೆ ನಮ್ಮ ಜಿಲ್ಲೆಯ ತಂಟೆಗೆ ಮಾತ್ರ ಬರಬೇಡಿ ಎಂದು ಟೀಕಿಸಿದ್ದಾರೆ.

ಚಿಕ್ಕಬಳ್ಳಾಪುರ, ತುಮಕೂರು ಮುಗಿಸಿ ಈಗ ಮಂಡ್ಯಕ್ಕೆ ಬರುತ್ತಿದ್ದಾರೆ. ಪಾಪ, ಪುಟ್ಟರಾಜು ಕೈಯಲ್ಲಿ ಸಭೆ ಮಾಡಿಸಿದರು. ಆಯೋಧ್ಯೆಯ ರಾಮಮಂದಿರ ಸೇರಿ ಹಲವು ದೇವಾಲಯಗಳನ್ನು ಸುತ್ತಿಸಿದರು. ಈಗ ತಾನೇ ಅಭ್ಯರ್ಥಿ ಅಂದರೆ ಪುಟ್ಟರಾಜು ಕತೆ ಏನಾಗಬೇಕು ನಾನು ಕಾಂಗ್ರೆಸ್‌ ಸೇರಿ ಬಚಾವ್‌ ಆದೆ ಎಂದರು.

ಕಳೆದ ಬಾರಿಯ ಚುನಾವಣೆಯಲ್ಲಿ ಸುಮಲತಾ ಅವರನ್ನು ನಿಂದಿಸಿದರು. ಆದರೆ ಈಗ ಅಕ್ಕ ಎನ್ನುತ್ತಿದ್ದಾರೆ. ಆಗಲೇ ಈ ಮಾತು ಹೇಳಿದ್ದರೆ ಅಂಬರೀಷ್‌ ಆತ್ಮಕ್ಕೆ ಶಾಂತಿ ಸಿಗುತ್ತಿತ್ತು. ನಮ್ಮ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು ಅವರ ಬಗ್ಗೆ ಕ್ಷೇತ್ರದಾದ್ಯಂತ ಉತ್ತಮ ಅಭಿಪ್ರಾಯಯವಿದ್ದು, ನಮ್ಮ ವಿರುದ್ಧ ಯಾರೇ ಅಭ್ಯರ್ಥಿಯಾದರೂ ನಮಗೆ ಚಿಂತೆ ಇಲ್ಲ ಎಂದರು.

andolana

Recent Posts

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

34 mins ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

7 hours ago

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

7 hours ago

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…

7 hours ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

7 hours ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

7 hours ago