ಮಂಡ್ಯ: ಜಾತಿಗಣತಿ ವರದಿಯಿಂದ ಸಮಾಜ ಒಡೆಯುವ ಕೆಲಸವಾಗುತ್ತಿದೆ ಎಂಬ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಆರೋಪಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.
ಜಾತಿಗಣತಿ ವರದಿ ಬಗ್ಗೆ ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಮಾತನಾಡಲು ಏನೂ ಉಳಿದಿಲ್ಲ. ಮೀನು ಕ್ಷಣದಲ್ಲೇ ಕೈಯಿಂದ ಜಾರಿ ಹೋದಂತೆ ಏನೂ ಸಿಗುತ್ತಿಲ್ಲ. ಹಾಗಾಗಿ ಜಾತಿ ಗಣತಿ ವರದಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಇನ್ನು ಜಾತಿ ಗಣತಿ ವರದಿ ಬಗ್ಗೆ ಸ್ವಾಮೀಜಿಗಳು ಆಕ್ಷೇಪ ವ್ಯಕ್ತಪಡಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜಾತಿ ಗಣತಿ ವರದಿಯಲ್ಲಿ ಏನೇನಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಹಾಗಾಗಿ ಸುಮ್ಮನೆ ಯಾರೂ ಕೂಡ ಮಾತನಾಡಬಾರದು. ಜಾತಿ ಗಣತಿ ಬಗ್ಗೆ ಊಹಾಪೋಹ ಎಬ್ಬಿಸುವುದು ಸರಿಯಲ್ಲ. ಜಾತಿ ಗಣತಿಯಿಂದ ಯಾವ ಸಮುದಾಯಕ್ಕೂ ಅನ್ಯಾಯ ಆಗಲ್ಲ. ಈಗಾಗಲೇ ವರದಿ ಸಚಿವ ಸಂಪುಟದಲ್ಲಿ ಮಂಡನೆ ಆಗಿದೆ. ವರದಿ ಬಗ್ಗೆ ಕೂಲಂಕುಷವಾಗಿ ಚರ್ಚೆ ಆಗಬೇಕಿದೆ ಎಂದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…