ಮಂಡ್ಯ

ಬಿಜೆಪಿಯವರನ್ನು ನೋಡಿದರೆ ನನ್ನ ಹೊಟ್ಟೆ ಉರಿಯುತ್ತೆ: ಸಚಿವ ಎನ್.ಚಲುವರಾಯಸ್ವಾಮಿ ವ್ಯಂಗ್ಯ

ಮಂಡ್ಯ: ಜಾತಿಗಣತಿ ವರದಿಯಿಂದ ಸಮಾಜ ಒಡೆಯುವ ಕೆಲಸವಾಗುತ್ತಿದೆ ಎಂಬ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರ ಆರೋಪಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ.

ಜಾತಿಗಣತಿ ವರದಿ ಬಗ್ಗೆ ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರಿಗೆ ಮಾತನಾಡಲು ಏನೂ ಉಳಿದಿಲ್ಲ.‌ ಮೀನು ಕ್ಷಣದಲ್ಲೇ ಕೈಯಿಂದ ಜಾರಿ ಹೋದಂತೆ ಏನೂ ಸಿಗುತ್ತಿಲ್ಲ. ಹಾಗಾಗಿ ಜಾತಿ ಗಣತಿ ವರದಿ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಇನ್ನು ಜಾತಿ ಗಣತಿ ವರದಿ ಬಗ್ಗೆ ಸ್ವಾಮೀಜಿಗಳು ಆಕ್ಷೇಪ ವ್ಯಕ್ತಪಡಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜಾತಿ ಗಣತಿ ವರದಿಯಲ್ಲಿ ಏನೇನಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಹಾಗಾಗಿ ಸುಮ್ಮನೆ ಯಾರೂ ಕೂಡ ಮಾತನಾಡಬಾರದು. ಜಾತಿ ಗಣತಿ ಬಗ್ಗೆ ಊಹಾಪೋಹ ಎಬ್ಬಿಸುವುದು ಸರಿಯಲ್ಲ. ಜಾತಿ ಗಣತಿಯಿಂದ ಯಾವ ಸಮುದಾಯಕ್ಕೂ ಅನ್ಯಾಯ ಆಗಲ್ಲ. ಈಗಾಗಲೇ ವರದಿ ಸಚಿವ ಸಂಪುಟದಲ್ಲಿ ಮಂಡನೆ ಆಗಿದೆ. ವರದಿ ಬಗ್ಗೆ ಕೂಲಂಕುಷವಾಗಿ ಚರ್ಚೆ ಆಗಬೇಕಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

8 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

14 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

17 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago