ಮಂಡ್ಯ

ಮಂಡ್ಯ | ಚಲುವರಾಯಸ್ವಾಮಿ ಹುಟ್ಟುಹಬ್ಬ : 100 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳಿಸಿದ ಸರ್ಕಾರಿ ಪ್ರೌಢಶಾಲೆಗಳ ೧೦೦ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಅಭಿನಂದನಾ ಸಮಾರಂಭವನ್ನು ಜೂನ್ ೦೧ರ ಬೆಳಿಗ್ಗೆ ೧೦.೩೦ಕ್ಕೆ ನಗರದ ಶ್ರೀ ಲಕ್ಷ್ಮೀ ಜರ್ನಾಧನ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ಅವರ ಅಭಿಮಾನಿ ಬಳಗವು ನಿರ್ಧರಿಸಿದೆ ಎಂದರು.

ಕಾರ್ಯಕ್ರಮವನ್ನು ಸಚಿವರ ಸಹೋದರ ಲಕ್ಷ್ಮೀಕಾಂತ್ ಉದ್ಘಾಟಿಸಲಿದ್ದು, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅಧ್ಯಕ್ಷತೆ ವಹಿಸುವರು. ವಿಶ್ರಾಂತ ಪ್ರಾಂಶುಪಾಲ ಎಸ್.ಬಿ.ಶಂಕರೇಗೌಡ ಅವರು ಪ್ರಧಾನ ಭಾಷಣ ಮಾಡಲಿದ್ದು, ಮನ್‌ಮುಲ್ ಅಧ್ಯಕ್ಷ ಶಿವಪ್ಪ, ಮೂಡಾ ಅಧ್ಯಕ್ಷ ನಯೀಂ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಕೆಡಿಪಿ ಸದಸ್ಯ ಸಿ.ಎಂ.ದ್ಯಾವಪ್ಪ ಮಾತನಾಡಿ, ಸಚಿವರ ಜನ್ಮದಿನದ ಹಿನ್ನಲೆ ಮಂಡ್ಯ ಕೃಷಿ ವಿವಿ, ವಿ.ಸಿ.ಫಾರಂ, ಮಿಮ್ಸ್ ರಕ್ತಕೋಶ, ರೆಡ್‌ಕ್ರಾಸ್, ಡಿಆರ್‌ಪಿಬಿ ಫೌಂಡೇಷನ್ ವತಿಯಿಂದ ಜೂ.೦೩ರಂದು ವಿ.ಸಿ.ಫಾರಂನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ರಕ್ತದಾನ ಶಿಬಿರವನ್ನು ಶಾಸಕ ಪಿ.ರವಿಕುಮಾರ್‌ಗೌಡ ಉದ್ಘಾಟಿಸಲಿದ್ದು, ಕೃಷಿ ವಿವಿಯ ಡೀನ್ ಫಾತಿಮಾ ಅಧ್ಯಕ್ಷತೆ ವಹಿಸುವರು, ಸಚಿವರ ಪುತ್ರ ಸಚಿನ್ ಚಲುವರಾಯಸ್ವಾಮಿ ಅವರು ಉಪಸ್ಥಿತರಿರಲಿದ್ದಾರೆ ಎಂದು ವಿವರಿಸಿ ಉಭಯ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯ ಹಿತೈಷಿಗಳು, ಅಭಿಮಾನಿಗಳು ಭಾಗವಹಿಸುವಂತೆ ಮನವಿ ಮಾಡಿದರು.

ಮೈಷುಗರ್ ಆವರಣದಲ್ಲಿ ಮರ ಕಡಿದಿರುವ ಸಂಬಂಧ ಬಿಜೆಪಿ ಮುಖಂಡ ಶಿವಕುಮಾರ್ ಅವರು ಮೈಷುಗರ್ ಅಧ್ಯಕ್ಷರ ಮೇಲೆ ಇಲ್ಲಸಲ್ಲದ ಹಾಗೂ ಆರೋಪ ಮಾಡಿದ್ದು, ಈ ಸಂಬಂಧ ದಾಖಲೆಗಳನ್ನು ಬಿಡುಗಡೆ ಮಾಡಬೇಕು. ಸಾಕ್ಷ್ಯಾಧಾರ ರಹಿತ ಆರೋಪ ಮಾಡಿರುವ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಮುಖಂಡರಾದ ರಮೇಶ್, ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಜಿಲ್ಲಾಧ್ಯಕ್ಷ ಕೃಷ್ಣ ಸಾತನೂರು, ಅಲ್ಪಾಸಂಖ್ಯಾತ ಸಮಿತಿ ಜಿಲ್ಲಾಧ್ಯಕ್ಷ ಮುಜಾಹಿದ್ ಅಲಿಖಾನ್, ಪರಿಶಿಷ್ಟ ಜಾತಿ ಘಟಕದ ಉಪಾಧ್ಯಕ್ಷ ವಿಜಿಕುಮಾರ್ ಇದ್ದರು.

ಆಂದೋಲನ ಡೆಸ್ಕ್

Recent Posts

IPL 2026 | ಕಂಗೆಟ್ಟ ಕ್ಯಾಪಿಟಲ್ಸ್‌ ; ಡೆಲ್ಲಿ ವಿರುದ್ಧ ಆರ್‌ಸಿಬಿಗೆ ಸುಲಭ ಜಯ

ನವದೆಹಲಿ : ಹ್ಯಾಜಲ್‌ವುಡ್‌, ಭುವನೇಶ್ವರ್ ಬೌಲಿಂಗ್‌ ಅಬ್ಬರ, ಸಂಘಟಿತ ಫೀಲ್ಡಿಂಗ್‌ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

4 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

5 hours ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

6 hours ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

6 hours ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

7 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

7 hours ago