ಮಂಡ್ಯ

ಮತ್ತೆ ಚಿರತೆ ಪ್ರತ್ಯಕ್ಷ: ಕೆಆರ್‌ಎಸ್ ಪ್ರವೇಶ ಬಂದ್

ಶ್ರೀರಂಗಪಟ್ಟಣ : ವಿಶ್ವ ಪ್ರಸಿದ್ಧ ಕೆಆರ್‌ಎಸ್ ಬೃಂದಾವನದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಶುಕ್ರವಾರ ಎಂದಿನಂತೆ ಪ್ರವಾಸಿಗರಿಂದ ಶುಲ್ಕ ಪಡೆದು ಬೃಂದಾವನ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು. ದಿಢೀರ್ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರನ್ನು ಹಿಂದಕ್ಕೆ ಕಳುಹಿಸಲಾಗಿದೆ. ಆ ವೇಳೆ ಪ್ರವಾಸಿಗರು ಹಾಗೂ ಸಿಬ್ಬಂದಿ ವಿರುದ್ಧ ಮಾತಿನ ಚಕಮಕಿಯೂ ನಡೆದಿದೆ. ವಾರದ ಹಿಂದೆಯೇ ಚಿರತೆ ಕಾಣಿಸಿಕೊಂಡಿತ್ತು. ಅರಣ್ಯಇಲಾಖೆ ಬೋನು ಇಟ್ಟಿದ್ದರೂ ಚಿರತೆ ಬೋನಿಗೆ ಬಿದ್ದಿರಲಿಲ್ಲ. ಆದರೂ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದು ಚರ್ಚೆಗೆ ಗ್ರಾಸವಾಗಿದೆ.

ಇಂದು ಪ್ರವೇಶ ನಿಷೇಧ:

ಶನಿವಾರ ಕೆಆರ್‌ಎಸ್ ಬೃಂದಾವನ ಪ್ರವಾಸಿಗರ ಪ್ರವೇಶ ನಿಷೇಧಿಸಿ ಕಾವೇರಿ ನೀರಾವರಿ ನಿಗಮ ಇಇ ರಾಮಮೂರ್ತಿ ಆದೇಶ ನೀಡಿದ್ದಾರೆ. ಕಳೆದ ನಾಲ್ಕೈದು ದಿನಗಳ ಹಿಂದೆ ಚಿರತೆ ಪ್ರತ್ಯಕ್ಷವಾಗಿತ್ತು. ಆ ವೇಳೆ ಅರಣ್ಯಇಲಾಖೆ ಅಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಪ್ರವಾಸಿಗರಿಗೆ ಪ್ರವೇಶ ಮಾಡಲು ಅವಕಾಶ ಕಲ್ಪಿಸಲಾಗಿತ್ತು.ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ

andolana

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

4 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

4 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

4 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

4 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

4 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

4 hours ago