ಶ್ರೀರಂಗಪಟ್ಟಣ : ವಿಶ್ವ ಪ್ರಸಿದ್ಧ ಕೆಆರ್ಎಸ್ ಬೃಂದಾವನದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಶುಕ್ರವಾರ ಎಂದಿನಂತೆ ಪ್ರವಾಸಿಗರಿಂದ ಶುಲ್ಕ ಪಡೆದು ಬೃಂದಾವನ ವೀಕ್ಷಣೆಗೆ ಅವಕಾಶ ನೀಡಲಾಗಿತ್ತು. ದಿಢೀರ್ ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರನ್ನು ಹಿಂದಕ್ಕೆ ಕಳುಹಿಸಲಾಗಿದೆ. ಆ ವೇಳೆ ಪ್ರವಾಸಿಗರು ಹಾಗೂ ಸಿಬ್ಬಂದಿ ವಿರುದ್ಧ ಮಾತಿನ ಚಕಮಕಿಯೂ ನಡೆದಿದೆ. ವಾರದ ಹಿಂದೆಯೇ ಚಿರತೆ ಕಾಣಿಸಿಕೊಂಡಿತ್ತು. ಅರಣ್ಯಇಲಾಖೆ ಬೋನು ಇಟ್ಟಿದ್ದರೂ ಚಿರತೆ ಬೋನಿಗೆ ಬಿದ್ದಿರಲಿಲ್ಲ. ಆದರೂ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಇದು ಚರ್ಚೆಗೆ ಗ್ರಾಸವಾಗಿದೆ.
ಇಂದು ಪ್ರವೇಶ ನಿಷೇಧ:
ಶನಿವಾರ ಕೆಆರ್ಎಸ್ ಬೃಂದಾವನ ಪ್ರವಾಸಿಗರ ಪ್ರವೇಶ ನಿಷೇಧಿಸಿ ಕಾವೇರಿ ನೀರಾವರಿ ನಿಗಮ ಇಇ ರಾಮಮೂರ್ತಿ ಆದೇಶ ನೀಡಿದ್ದಾರೆ. ಕಳೆದ ನಾಲ್ಕೈದು ದಿನಗಳ ಹಿಂದೆ ಚಿರತೆ ಪ್ರತ್ಯಕ್ಷವಾಗಿತ್ತು. ಆ ವೇಳೆ ಅರಣ್ಯಇಲಾಖೆ ಅಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಪ್ರವಾಸಿಗರಿಗೆ ಪ್ರವೇಶ ಮಾಡಲು ಅವಕಾಶ ಕಲ್ಪಿಸಲಾಗಿತ್ತು.ಚಿರತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…
ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…