ಮಂಡ್ಯ

ಸಚಿವ ಚಲುವರಾಯಸ್ವಾಮಿ ಹುಟ್ಟುಹಬ್ಬ : ರೋಗಿಗಳಿಗೆ ಹಣ್ಣು ವಿತರಣೆ

ಮಂಡ್ಯ: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಮಂಡ್ಯ ಜಿಲ್ಲೆಯಲ್ಲಿ ಕೆ.ವಿ.ಶಂಕರಗೌಡ, ಎಚ್.ಕೆ.ವೀರಣ್ಣಗೌಡ, ಜಿ.ಮಾದೇಗೌಡ, ಎಸ್.ಎಂ.ಕೃಷ್ಣ ಅವರ ನಂತರದ ನಾಯಕತ್ವದಲ್ಲಿ ಅದೇ ಹಾದಿಯಲ್ಲಿ ಬೆಳೆದು ಬಂದು ಎಸ್.ಡಿ.ಜಯರಾಂ ಗರಡಿಯಲ್ಲಿ ಹೆಚ್ಚಿನ ನಾಯಕತ್ವ ರೂಪಿಸಿಕೊಂಡು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗುವ ಮೂಲಕ ಗ್ರಾಮೀಣ ಪ್ರದೇಶದ ಕೆಳಹಂತದ ಜನರಿಗೆ ನಾಯಕತ್ವ ಕೊಟ್ಟವರು ಎಂದು ತಾಪಂ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು ಬಣ್ಣಿಸಿದರು.

ಸಚಿವ ಎನ್.ಚಲುವರಾಯಸ್ವಾಮಿ ಹುಟ್ಟುಹಬ್ಬದ ಅಂಗವಾಗಿ ವಿದ್ಯಾನಗರದಲ್ಲಿರುವ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಚಲುವರಾಯಸ್ವಾಮಿ ಅವರು ಆರೋಗ್ಯ ಸಚಿವರಾಗಿದ್ದಾಗ ಮಂಡ್ಯಕ್ಕೆ ಮೆಡಿಕಲ್ ಕಾಲೇಜನ್ನು ತಂದರು. ಕೃಷಿ ಮಂತ್ರಿಯಾಗಿ ಕೃಷಿ ವಿಶ್ವವಿದ್ಯಾನಿಲಯ ತಂದು, ನನೆಗುದಿಗೆ ಬಿದ್ದಿದ್ದ ಮೈಶುಗರ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿದ್ದಾರೆ. ಜಿಲ್ಲೆಯು ಸಮಗ್ರವಾದ ಅಭಿವೃದ್ಧಿಯತ್ತ ಸಾಗುವ ನಿಟ್ಟಿನಲ್ಲಿ ಅವರ ನಾಯಕತ್ವ ಮುನ್ನಡೆಯಲಿ ಎಂದು ಹೇಳಿದರು.

ಮಿಮ್ಸ್ ಆವರಣದ ಮಮತೆಯ ಮಡಿಲುವಿನಲ್ಲಿ ರೋಗಿಗಳಿಗೆ ಮತ್ತು ಅವಲಂಬಿತರಿಗೆ ಉಪಾಹಾರ ಹಾಗೂ ಊಟದ ವ್ಯವಸ್ಥೆ, ಹಣ್ಣು ಹಂಪಲು ವಿತರಣೆ, ಸೇವಾಕಿರಣ ವೃದ್ಧಾಶ್ರಮದ ವೃದ್ಧರಿಗೆ ಮಡಿವಾಳ ಸಮಾಜದ ಕಾಂಗ್ರೆಸ್ ಮುಖಂಡ ಹಳುವಾಡಿ ವೆಂಕಟೇಶ್ ನೇತೃತ್ವದಲ್ಲಿ ಬೆಡ್‌ಶೀಟ್ ವಿತರಣೆ ಮಾಡಲಾಗಿದೆ ಎಂದು ತಿಳಿಸಿದರು.

ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಕಂಬದಹಳ್ಳಿ ಪುಟ್ಟಸ್ವಾಮಿ ಮಾತನಾಡಿ, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ರಾಜಕಾರಣದಲ್ಲಿ ಇನ್ನೂ ಉತ್ತಮ ಅವಕಾಶಗಳು ಲಭಿಸಲಿ ಎಂದು ಹಾರೈಸಿದರು.

ಮಾಜಿ ಶಾಸಕ ಎಚ್.ಬಿ.ರಾಮು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ, ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ನೀಲಾಮೂರ್ತಿ, ವಿಜಯಲಕ್ಷ್ಮಿ ರಘುನಂದನ್, ಬೇಲೂರು ಸೋಮಶೇಖರ್, ಕೆರಗೋಡು ಸೋಮಶೇಖರ್, ಅಭಿಲಾಶ್, ಅಪ್ಪಾಜಿಗೌಡ, ಶ್ರೀಧರ್, ನವೀನ್, ಶಂಕರಲಿಂಗೇಗೌಡ, ದೀಪಕ್, ಶಿವನಂಜು, ಸುಂಡಹಳ್ಳಿ ಮಂಜುನಾಥ್, ಎಂ.ಎಸ್.ಚಿದಂಬರ್, ಸಿ.ಎಂ.ದ್ಯಾವಪ್ಪ, ಚಂದಗಾಲು ವಿಜಯ್‌ಕುಮಾರ್, ಕೃಷ್ಣ, ನಾಗೇಶ್, ಸೋಮಶೇಖರ್ ಇತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

10 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

11 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

14 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

16 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

17 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

18 hours ago