ಮಂಡ್ಯ

ಬಸವಣ್ಣ ಜಗತ್ತಿನ ಬೆಳಕು ; ಸಚಿವ ಚಲುವರಾಯಸ್ವಾಮಿ ಬಣ್ಣನೆ

ಮಂಡ್ಯ : ವಿಶ್ವಗುರು ಬಸವಣ್ಣನವರು ತಮ್ಮ ತತ್ವ, ವಕ್ತಿತ್ವ, ಚಿಂತನೆ ಹಾಗೂ ಆದರ್ಶಗಳ ಮೂಲಕ ಜಗತ್ತಿಗೆ ಬೆಳಕಾದವರು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬುಧವಾರ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ವಿಶ್ವಗುರು ಬಸವಣ್ಣ ಅವರ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣರ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಅವರು ಮಾತನಾಡಿದರು.

ಬಸವಣ್ಣ ಹಣ, ಆಡಳಿತ ಹಾಗೂ ಅಧಿಕಾರದಿಂದ ಪ್ರಸಿದ್ದಿಯೊಂದಿದವರಲ್ಲ. ಅವರು ತಮ್ಮ ವ್ಯಕ್ತಿತ್ವದಿಂದ ಜಗತ್ಪ್ರಸಿದ್ಧಿ ಹೊಂದಿದವರು ಅವರಂತ ಮತ್ತೊಬ್ಬ ವ್ಯಕ್ತಿ ಜನಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಎಲ್ಲಾ ಜಾತಿ, ಧರ್ಮದವರು ಒಪ್ಪುವ ನಾಯಕ ಬಸವಣ್ಣನವರು ಎಂದರೆ ತಪ್ಪಾಗುವುದಿಲ್ಲ. ಸಮಾಜದ ಒಗ್ಗಟ್ಟಿಗಾಗಿ 12ನೇ ಶತಮಾನದಲ್ಲಿ ಅವರು ಚರಿತ್ರೆಯನ್ನೇ ಸೃಷ್ಟಿಸಿದ್ದಾರೆ ಎಂದು ತಿಳಿಸಿದರು.

ಸಮಾಜದ ಒಳಿತು ಹಾಗೂ ಸಮಾನತೆಗಾಗಿ ಮುಂದಿನ ಪೀಳಿಗೆಗಳಿಗೆ ಬಸವಣ್ಣನವರ ತತ್ವ ಮತ್ತು ಆದರ್ಶಗಳ ಬಗ್ಗೆ ಹೆಚ್ಚಾಗಿ ಅರಿವು ಮೂಡಿಸಬೇಕಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ದುರ್ದಂಡೇಶ್ವರ ಮಹಾಂತ ಶಿವಯೋಗಿಗಳ ಮಠದ ಡಾ. ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮಿ ಮಾತನಾಡಿ, 12 ನೇ ಶತಮಾನದಲ್ಲಿ ಮಹಿಳೆಯರಿಗೆ ಪುರುಷರಷ್ಟೇ ಸಮಾನತೆಯನ್ನು ಕಲ್ಪಿಸಬೇಕೆಂಬ ಅವರ ಚಿಂತನೆ ಇಂದು ಕಾನೂನಿನ ಸಮಾನತೆ ಹಕ್ಕಾಗಿ ಪರಿವರ್ತನೆಗೊಂಡಿದೆ ಎಂದರು.

ದ್ವೇಷದಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ, ಎಲ್ಲರನ್ನು ಪ್ರೀತಿ ಮತ್ತು ಗೌರವದಿಂದ ಕಾಣಬೇಕು ಎನ್ನುವಂತಹದ್ದು ಅವರ ಆಶಾಯವಾಗಿತ್ತು. ಅವರ ಹಾದಿಯಲ್ಲಿ ಪ್ರತಿಯೊಬ್ಬರು ಸಾಗಬೇಕು ಎಂದು ತಿಳುವಳಿಕೆ ಹೇಳಿದರು.

ಡಾ. ಎಸ್. ಶಿವರಾಜಪ್ಪ ಬಸವಣ್ಣ ಅವರ ಬಗ್ಗೆ ವಿಶೇಷ ಉಪನ್ಯಾನ ನೀಡಿದರು.

ಕಾರ್ಯಕ್ರಮದಲ್ಲಿ ಶಾಸಕ ಪಿ. ರವಿಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ. ಸಿ ಶಿವಾನಂದಮೂರ್ತಿ, ಉಪವಿಭಾಗಾಧಿಕಾರಿ ಶಿವಮೂರ್ತಿ, ತಹಸೀಲ್ದಾರ್ ಶಿವಕುಮಾರ್ ಬಿರಾದಾರ್ ಮತ್ತು ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

3 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

3 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

3 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

3 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

3 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

3 hours ago